ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡ್ಲಿಗಿ: ಅಪರಿಚಿತ ವಾಹನ ಡಿಕ್ಕಿ, ಕರಡಿ ಸಾವು

Last Updated 21 ಸೆಪ್ಟೆಂಬರ್ 2021, 3:58 IST
ಅಕ್ಷರ ಗಾತ್ರ

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಮಂಗಳವಾರ ಬೆಳಗಿನ ಜಾವ ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಸ್ಥಳದಲ್ಲೇ ಮೃತಪಟ್ಟಿದೆ.

ಸುಮಾರು 10 ವರ್ಷದ ಕರಡಿ ರಾತ್ರಿ ಆಹಾರ ಅರಸಿಕೊಂಡು ಹೆದ್ದಾರಿ ಪಕ್ಕದ ಗದ್ದೆಗೆ ಬಂದಿದೆ. ನಸುಕಿನ ಜಾವ ಹೆದ್ದಾರಿ ದಾಟಿಕೊಂಡು ಪುನಃ ಕಾಡಿಗೆ ಹೋಗುವಾಗ ವಾಹನ ಡಿಕ್ಕಿ ಹೊಡೆದಿರುವ ಸಾಧ್ಯತೆ‌ ಇದೆ ಎಂದು ವಲಯ ಅರಣ್ಯ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.

ಆಗಸ್ಟ್ 21ರಂದು ಇದೇ ರೀತಿಯ ಘಟನೆಯಲ್ಲಿ ಕರಡಿ ಸಾವನ್ನಪ್ಪಿತ್ತು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೊಂಡ ನಂತರ ವಾಹನಗಳು ವೇಗವಾಗಿ ಚಲಿಸುತ್ತಿವೆ. ಕರಡಿಗಳು ಓಡಾಡುವ ಜಾಗದಲ್ಲಿ ಮೇಲ್ಸೇತುವೆ ನಿರ್ಮಿಸಿದ್ದರೆ ಈ ರೀತಿಯ ಘಟನೆಗಳು ಆಗುತ್ತಿರಲಿಲ್ಲ ಎನ್ನುತ್ತಾರೆ ಗ್ರಾಮಸ್ಥರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT