<p><strong>ಹೊಸಪೇಟೆ (ವಿಜಯನಗರ):</strong> ಸರ್ಕಾರ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅಸಂಘಟಿತ ಕಾರ್ಮಿಕರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇದರ ಮುಖ್ಯ ಉದ್ದೇಶವಾಗಿದೆ ಎಂದು ವಿಜಯನಗರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸೂರಪ್ಪ ಡೊಂಬಲಮತ್ತೂರ ತಿಳಿಸಿದ್ದಾರೆ.</p>.<p>ಕಾರ್ಮಿಕರ ಕುಟುಂಬದಲ್ಲಿ ಜನನದಿಂದ ಹಿಡಿದು ಮರಣದ ವರೆಗೆ ಹಲವು ಯೋಜನೆಗಳಿದ್ದು, ಅದರ ಬಗ್ಗೆ ಮಾಹಿತಿ ಪಡೆದು ಅನುದಾನ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.</p>.<p>ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಸಾವನ್ನಪ್ಪಿದರೆ ಅಥವಾ ಅಪಘಾತವಾಗಿ ಶಾಶ್ವತ ದುರ್ಬಲತೆ ಹೊಂದಿದರೆ, ಕಾರ್ಮಿಕ ಕುಟುಂಬಕ್ಕೆ ಸರ್ಕಾರದಿಂದ ಸಹಾಯಹಸ್ತ ನೀಡಲಾಗುತ್ತದೆ. ಫಲಾನುಭವಿ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ತಲಾ ₹ 60 ಸಾವಿರದವರೆಗೆ ಸಹಾಯಧನ ಇದೆ. ಮೊದಲ ಎರಡು ಹೆರಿಗೆಗೆ ಮಹಿಳೆಗೆ ತಲಾ ₹ 50 ಸಾವಿರ ಸಹಾಯಧನ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಫಲಾನುಭವಿಯ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯಧನ, ನೋಂದಾಯಿತ ಫಲಾನುಭವಿ ಹಾಗೂ ಅವರ ಅವಲಂಭಿತರಿಗೆ ₹ 300 ರಿಂದ ₹ 20 ಸಾವಿರದವರೆಗೆ ಸಹಾಯಧನ, ಕಾರ್ಮಿಕರು ಮರಣ ಹೊಂದಿದ್ದಲ್ಲಿ ₹ 5 ಲಕ್ಷ, ಸಂಪೂರ್ಣ ಶಾಶ್ವತ ದುರ್ಬಲತೆಯಾದಲ್ಲಿ ₹2 ಲಕ್ಷ, ಭಾಗಶಃ ಶಾಶ್ವತ ದುರ್ಬಲತೆಯಾದಲ್ಲಿ ₹ 1ಲಕ್ಷದವರೆಗೆ ಸಹಾಯಧನ ನೀಡಲಾಗುವುದು ಎಂದಿದ್ದಾರೆ.</p>.<p>ಔದ್ಯೋಗಿಕ ಕಾಯಿಲೆಗಳ ಚಿಕಿತ್ಸೆಗಳಿಗೆ ₹ 2 ಲಕ್ಷದವರೆಗೆ ವೈದ್ಯಕೀಯ ವೆಚ್ಚದ ಸಹಾಯಧನ, ಮಹಿಳಾ ಫಲಾನುಭವಿ ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಆಕೆಯ ಮಗುವಿನ ಶಾಲಾ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷಗಳು ತುಂಬುವವರೆಗೆ ವಾರ್ಷಿಕ ₹6,000 ಸಹಾಯಧನ, ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗೆ ಮಾಸಿಕ ₹3,000 ವರೆಗೆ ಸಹಾಯಧನ. ಕುಟುಂಬ ಪಿಂಚಣಿ ಸೌಲಭ್ಯ ಅಡಿಯಲ್ಲಿ ಮೃತ ಪಿಂಚಣಿದಾರರ ಪತಿ, ಪತ್ನಿಗೆ ಮಾಸಿಕ ₹1,500 ವರೆಗೆ, ದುರ್ಬಲತೆ ಪಿಂಚಣಿ ಅಡಿಯಲ್ಲಿ ನೋಂದಾಯಿತ ಫಲಾನುಭವಿಯು ಕಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ, ಭಾಗಶಃ ಅಂಗವಿಕಲತೆ ಹೊಂದಿದ್ದರೆ ಮಾಸಿಕ ₹2,000, ಪಿಂಚಣಿ ಹಾಗೂ ಶೇಕಡವಾರು ದುರ್ಬಲತೆಯನ್ನಾಧರಿಸಿ ₹ 2 ಲಕ್ಷದವರೆಗೆ ಅನುಗ್ರಹ ರಾಶಿ ಸಹಾಯಧನ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.</p>.<p>ಅಂತ್ಯಕ್ರಿಯೆ ವೆಚ್ಚಕ್ಕಾಗಿ ₹4,000 ಹಾಗೂ ಅನುಗ್ರಹ ರಾಶಿ ₹ 71,000 ಸಹಾಯಧನ ಸೌಲಭ್ಯಗಳು ನೀಡಲಾಗುವುದು ಎಂದಿದ್ದಾರೆ.</p>.<p><strong>ಗಿಗ್ ಕಾರ್ಮಿಕರ ಸೌಲಭ್ಯಗಳು</strong> </p><p>ಗಿಗ್ ಕಾರ್ಮಿಕರು ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ₹2 ಲಕ್ಷ ಹಾಗೂ ಜೀವ ವಿಮಾ ₹ 2 ಲಕ್ಷ ಸೇರಿ ಒಟ್ಟು ₹ 4 ಲಕ್ಷಗಳು ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ₹2 ಲಕ್ಷಗಳವರೆಗೆ ಸಹಾಯಧನ ಆಸ್ಪತ್ರೆ ವೆಚ್ಚ ಮರುಪಾವತಿ ₹ 1 ಲಕ್ಷಗಳ ವರೆಗೆ (ಅಪಘಾತ ಪ್ರಕರಣಗಳಲ್ಲಿ ಮಾತ್ರ) ಜೀವ ವಿಮಾ ₹ 2ಲಕ್ಷ ನೀಡಲಾಗುವುದು. </p><p><strong>ದಿನ ಪತ್ರಿಕೆ ವಿತರಣಾ ಕಾರ್ಮಿಕರ ಸೌಲಭ್ಯಗಳು:</strong> ಅಪಘಾತದಿಂದ ಮರಣ ಹೊಂದಿದಲ್ಲಿ ₹ 2 ಲಕ್ಷ ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ₹ 2 ಲಕ್ಷಗಳವರೆಗೆ (ಶೇಕಡ ವಾರು ದುರ್ಬಲತೆ ಆಧಾರದ ಮೇಲೆ) ಅಪಘಾತ ಅಥವಾ ಗಂಭೀರ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ₹ 1ಲಕ್ಷಗಳವರೆಗೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಸರ್ಕಾರ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅಸಂಘಟಿತ ಕಾರ್ಮಿಕರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇದರ ಮುಖ್ಯ ಉದ್ದೇಶವಾಗಿದೆ ಎಂದು ವಿಜಯನಗರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸೂರಪ್ಪ ಡೊಂಬಲಮತ್ತೂರ ತಿಳಿಸಿದ್ದಾರೆ.</p>.<p>ಕಾರ್ಮಿಕರ ಕುಟುಂಬದಲ್ಲಿ ಜನನದಿಂದ ಹಿಡಿದು ಮರಣದ ವರೆಗೆ ಹಲವು ಯೋಜನೆಗಳಿದ್ದು, ಅದರ ಬಗ್ಗೆ ಮಾಹಿತಿ ಪಡೆದು ಅನುದಾನ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.</p>.<p>ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಸಾವನ್ನಪ್ಪಿದರೆ ಅಥವಾ ಅಪಘಾತವಾಗಿ ಶಾಶ್ವತ ದುರ್ಬಲತೆ ಹೊಂದಿದರೆ, ಕಾರ್ಮಿಕ ಕುಟುಂಬಕ್ಕೆ ಸರ್ಕಾರದಿಂದ ಸಹಾಯಹಸ್ತ ನೀಡಲಾಗುತ್ತದೆ. ಫಲಾನುಭವಿ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ತಲಾ ₹ 60 ಸಾವಿರದವರೆಗೆ ಸಹಾಯಧನ ಇದೆ. ಮೊದಲ ಎರಡು ಹೆರಿಗೆಗೆ ಮಹಿಳೆಗೆ ತಲಾ ₹ 50 ಸಾವಿರ ಸಹಾಯಧನ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಫಲಾನುಭವಿಯ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯಧನ, ನೋಂದಾಯಿತ ಫಲಾನುಭವಿ ಹಾಗೂ ಅವರ ಅವಲಂಭಿತರಿಗೆ ₹ 300 ರಿಂದ ₹ 20 ಸಾವಿರದವರೆಗೆ ಸಹಾಯಧನ, ಕಾರ್ಮಿಕರು ಮರಣ ಹೊಂದಿದ್ದಲ್ಲಿ ₹ 5 ಲಕ್ಷ, ಸಂಪೂರ್ಣ ಶಾಶ್ವತ ದುರ್ಬಲತೆಯಾದಲ್ಲಿ ₹2 ಲಕ್ಷ, ಭಾಗಶಃ ಶಾಶ್ವತ ದುರ್ಬಲತೆಯಾದಲ್ಲಿ ₹ 1ಲಕ್ಷದವರೆಗೆ ಸಹಾಯಧನ ನೀಡಲಾಗುವುದು ಎಂದಿದ್ದಾರೆ.</p>.<p>ಔದ್ಯೋಗಿಕ ಕಾಯಿಲೆಗಳ ಚಿಕಿತ್ಸೆಗಳಿಗೆ ₹ 2 ಲಕ್ಷದವರೆಗೆ ವೈದ್ಯಕೀಯ ವೆಚ್ಚದ ಸಹಾಯಧನ, ಮಹಿಳಾ ಫಲಾನುಭವಿ ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಆಕೆಯ ಮಗುವಿನ ಶಾಲಾ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷಗಳು ತುಂಬುವವರೆಗೆ ವಾರ್ಷಿಕ ₹6,000 ಸಹಾಯಧನ, ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗೆ ಮಾಸಿಕ ₹3,000 ವರೆಗೆ ಸಹಾಯಧನ. ಕುಟುಂಬ ಪಿಂಚಣಿ ಸೌಲಭ್ಯ ಅಡಿಯಲ್ಲಿ ಮೃತ ಪಿಂಚಣಿದಾರರ ಪತಿ, ಪತ್ನಿಗೆ ಮಾಸಿಕ ₹1,500 ವರೆಗೆ, ದುರ್ಬಲತೆ ಪಿಂಚಣಿ ಅಡಿಯಲ್ಲಿ ನೋಂದಾಯಿತ ಫಲಾನುಭವಿಯು ಕಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ, ಭಾಗಶಃ ಅಂಗವಿಕಲತೆ ಹೊಂದಿದ್ದರೆ ಮಾಸಿಕ ₹2,000, ಪಿಂಚಣಿ ಹಾಗೂ ಶೇಕಡವಾರು ದುರ್ಬಲತೆಯನ್ನಾಧರಿಸಿ ₹ 2 ಲಕ್ಷದವರೆಗೆ ಅನುಗ್ರಹ ರಾಶಿ ಸಹಾಯಧನ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.</p>.<p>ಅಂತ್ಯಕ್ರಿಯೆ ವೆಚ್ಚಕ್ಕಾಗಿ ₹4,000 ಹಾಗೂ ಅನುಗ್ರಹ ರಾಶಿ ₹ 71,000 ಸಹಾಯಧನ ಸೌಲಭ್ಯಗಳು ನೀಡಲಾಗುವುದು ಎಂದಿದ್ದಾರೆ.</p>.<p><strong>ಗಿಗ್ ಕಾರ್ಮಿಕರ ಸೌಲಭ್ಯಗಳು</strong> </p><p>ಗಿಗ್ ಕಾರ್ಮಿಕರು ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ₹2 ಲಕ್ಷ ಹಾಗೂ ಜೀವ ವಿಮಾ ₹ 2 ಲಕ್ಷ ಸೇರಿ ಒಟ್ಟು ₹ 4 ಲಕ್ಷಗಳು ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ₹2 ಲಕ್ಷಗಳವರೆಗೆ ಸಹಾಯಧನ ಆಸ್ಪತ್ರೆ ವೆಚ್ಚ ಮರುಪಾವತಿ ₹ 1 ಲಕ್ಷಗಳ ವರೆಗೆ (ಅಪಘಾತ ಪ್ರಕರಣಗಳಲ್ಲಿ ಮಾತ್ರ) ಜೀವ ವಿಮಾ ₹ 2ಲಕ್ಷ ನೀಡಲಾಗುವುದು. </p><p><strong>ದಿನ ಪತ್ರಿಕೆ ವಿತರಣಾ ಕಾರ್ಮಿಕರ ಸೌಲಭ್ಯಗಳು:</strong> ಅಪಘಾತದಿಂದ ಮರಣ ಹೊಂದಿದಲ್ಲಿ ₹ 2 ಲಕ್ಷ ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ₹ 2 ಲಕ್ಷಗಳವರೆಗೆ (ಶೇಕಡ ವಾರು ದುರ್ಬಲತೆ ಆಧಾರದ ಮೇಲೆ) ಅಪಘಾತ ಅಥವಾ ಗಂಭೀರ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ₹ 1ಲಕ್ಷಗಳವರೆಗೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>