10 ವರ್ಷಗಳ ಹಿಂದೆ ಮಲ್ಲಪ್ಪ ತಮ್ಮ ಅರ್ಧ ಎಕರೆ ಜಮೀನನ್ನು ಕಿರಿಯ ಸಹೋದರ ರಮೇಶನಿಗೆ ಲಾವಣಿ ಹಾಕಿದ್ದರು. ₹40 ಸಾವಿರ ಲಾವಣಿ ಹಣ ನಿಗದಿಪಡಿಸಿ, ₹37 ಸಾವಿರ ಮುಂಗಡ ನೀಡಿ ರಮೇಶ ಜಮೀನು ಉಳುಮೆ ಮಾಡಿಕೊಂಡಿದ್ದರು. ಲಾವಣಿ ಜಮೀನು ಮರಳಿ ಬಿಟ್ಟುಕೊಡುವ ವಿಚಾರದಲ್ಲಿ ಸಹೋದರರ ನಡುವೆ ಕೆಲ ದಿನಗಳಿಂದ ಜಗಳ ನಡೆಯಿತ್ತಿತ್ತು. ಇದೇ ವಿಚಾರಕ್ಕೆ ಭಾನುವಾರ ಸಂಜೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರಮೇಶನ ಎದೆಗೆ ಮಲ್ಲಪ್ಪ ಕತ್ತರಿಯಿಂದ ಚುಚ್ಚಿದ್ದಾನೆ. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಗಾಯಾಳುವನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯವಾಗ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ.