ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಕಂಬಾರ ಪತ್ನಿ ಸತ್ಯಭಾಮಾಗೆ ಶ್ರದ್ಧಾಂಜಲಿ

Last Updated 18 ಜನವರಿ 2022, 13:08 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ವಿಶ್ರಾಂತ ಕುಲಪತಿ ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮಾ ಕಂಬಾರ ನಿಧನಕ್ಕೆ ಮಂಗಳವಾರ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವಿ.ವಿ. ಭುವನ ವಿಜಯ ಸಭಾಂಗಣದಲ್ಲಿ ಸಭೆ ಸೇರಿದ ಬೋಧಕ, ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಎರಡು ನಿಮಿಷ ಮೌನ ಆಚರಿಸಿ ಗೌರವ ಸಲ್ಲಿಸಿದರು.

‘ಕನ್ನಡ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಪತಿ ಚಂದ್ರಶೇಖರ ಕಂಬಾರ ಅವರ ಎಲ್ಲ ಕನಸು, ಕಾಣ್ಕೆಗಳ ಪ್ರೇರಕ ಶಕ್ತಿ ಸತ್ಯಭಾಮಾ ಕಂಬಾರ ಆಗಿದ್ದರು. ವಿಶ್ವವಿದ್ಯಾಲಯದ ಕೂಡು ಕುಟುಂಬಕ್ಕೆ ತಾಯಿ ಆಗಿದ್ದರು. ಅವರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿ ದೇವರು ಕೊಡಲಿ’ ಎಂದು ಕುಲಪತಿ ಪ್ರೊ. ಸ.ಚಿ. ರಮೇಶ ಹೇಳಿದರು. ಕುಲಸಚಿವ ಪ್ರೊ. ಎ.ಸುಬ್ಬಣ್ಣ ರೈ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT