<p><strong>ಹೊಸಪೇಟೆ (ವಿಜಯನಗರ):</strong> ವಿಜಯನಗರ ಜಿಲ್ಲೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) 2025–26ನೇ ಆರ್ಥಿಕ ವರ್ಷಕ್ಕೆ ಸಿದ್ಧಪಡಿಸಿರುವ ಉದ್ದೇಶಿತ ಸಾಲ ಯೋಜನೆ (ಪಿಎಲ್ಪಿ) ಬಿಡುಗಡೆ ಮಾಡಲಾಗಿದ್ದು, ₹5,898.39 ಕೋಟಿ ಗುರಿ ನಿಗದಿಪಡಿಸಲಾಗಿದೆ.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಅವರು ಪಿಎಲ್ಪಿ ಬಿಡುಗಡೆ ಮಾಡಿದರು.</p>.<p>ಪಿಎಲ್ಪಿಯಲ್ಲಿ ಕೃಷಿಗೆ ವಿಶೇಷ ಒತ್ತು ನೀಡಲಾಗಿದೆ. ರೈತರಿಗೆ ಬೆಳೆಸಾಲಕ್ಕಾಗಿ ₹2,561.17 ಕೋಟಿ, ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ದೀರ್ಘಾವಧಿ ಸಾಲಕ್ಕೆ ₹963.07 ಕೋಟಿ, ಕೃಷಿಗೆ ಮೂಲ ಸೌಕರ್ಯ ಕಲ್ಪಿಸುವುದಕ್ಕಾಗಿ ₹66.83 ಕೋಟಿ ಮತ್ತು ಕೃಷಿ ಪೂರಕ ಚಟುವಟಿಕೆಗೆ ₹231.53 ಕೋಟಿ ಗುರಿ ಹಾಕಿಕೊಳ್ಳಲಾಗಿದೆ.</p>.<p>ಎಂಎಸ್ಎಂಇ ಕ್ಷೇತ್ರಕ್ಕೆ ₹1,777.43 ಕೋಟಿ, ರಫ್ತು ಸಾಲಕ್ಕೆ ₹21.60 ಕೋಟಿ, ಶಿಕ್ಷಣ ಕ್ಷೇತ್ರಕ್ಕೆ ₹23.76 ಕೋಟಿ, ಗೃಹ ನಿರ್ಮಾಣ ಕ್ಷೇತ್ರಕ್ಕೆ ₹117.04 ಕೋಟಿ, ಸಾಮಾಜಿಕ ಮೂಲಸೌಕರ್ಯ ಕ್ಷೇತ್ರಕ್ಕೆ ₹29 ಕೋಟಿ, ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ₹14.03 ಕೋಟಿ, ಇತರ ಕ್ಷೇತ್ರಗಳಿಗೆ ₹92.93 ಕೋಟಿ ಗುರಿ ನಿಗದಿಪಡಿಸಲಾಗಿದೆ.</p>.<p>ವಿವಿಧ ಕ್ಷೇತ್ರಗಳ ಪ್ರಸ್ತುತ ಸ್ಥಿತಿಯನ್ನು ಹಾಗೂ ಶ್ರೇಣೀಕರಿಸಬಹುದಾದ ಸಾಧ್ಯತೆಯನ್ನು ವಿಶ್ಲೇಷಿಸಿ, ಬ್ಯಾಂಕ್ ಸಾಲದ ಮೂಲಕ ಅಭಿವೃದ್ಧಿಯ ಸಾಧ್ಯತೆಗಳನ್ನು ಗುರುತಿಸುವ ಉದ್ದೇಶದಿಂದ ವಿವಿಧ ಕ್ಷೇತ್ರಗಳ ಅಧಿಕಾರಿಗಳು ಮತ್ತು ಪ್ರಮುಖರೊಂದಿಗೆ ಚರ್ಚಿಸಿ ಈ ಪಿಎಲ್ಪಿ ತಯಾರಿಸಲಾಗಿದೆ.</p>.<p>ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಯುವರಾಜಕುಮಾರ ಆರ್.ಎಸ್., ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದ್ಗಲ್, ಎಲ್ಡಿಯಂನ ನಟರಾಜ್, ಎಸ್ಬಿಐ, ಕೆನರಾ ಬ್ಯಾಂಕ್, ಯುಬಿಐ, ಕೆಜಿಬಿ, ಬಳ್ಳಾರಿ ಡಿಸಿಸಿ ಬ್ಯಾಂಕ್ನ ಜಿಲ್ಲಾ ಸಂಯೋಜಕರು, ವಿವಿಧ ಇಲಾಖೆ ಮುಖ್ಯಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ವಿಜಯನಗರ ಜಿಲ್ಲೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) 2025–26ನೇ ಆರ್ಥಿಕ ವರ್ಷಕ್ಕೆ ಸಿದ್ಧಪಡಿಸಿರುವ ಉದ್ದೇಶಿತ ಸಾಲ ಯೋಜನೆ (ಪಿಎಲ್ಪಿ) ಬಿಡುಗಡೆ ಮಾಡಲಾಗಿದ್ದು, ₹5,898.39 ಕೋಟಿ ಗುರಿ ನಿಗದಿಪಡಿಸಲಾಗಿದೆ.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಅವರು ಪಿಎಲ್ಪಿ ಬಿಡುಗಡೆ ಮಾಡಿದರು.</p>.<p>ಪಿಎಲ್ಪಿಯಲ್ಲಿ ಕೃಷಿಗೆ ವಿಶೇಷ ಒತ್ತು ನೀಡಲಾಗಿದೆ. ರೈತರಿಗೆ ಬೆಳೆಸಾಲಕ್ಕಾಗಿ ₹2,561.17 ಕೋಟಿ, ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ದೀರ್ಘಾವಧಿ ಸಾಲಕ್ಕೆ ₹963.07 ಕೋಟಿ, ಕೃಷಿಗೆ ಮೂಲ ಸೌಕರ್ಯ ಕಲ್ಪಿಸುವುದಕ್ಕಾಗಿ ₹66.83 ಕೋಟಿ ಮತ್ತು ಕೃಷಿ ಪೂರಕ ಚಟುವಟಿಕೆಗೆ ₹231.53 ಕೋಟಿ ಗುರಿ ಹಾಕಿಕೊಳ್ಳಲಾಗಿದೆ.</p>.<p>ಎಂಎಸ್ಎಂಇ ಕ್ಷೇತ್ರಕ್ಕೆ ₹1,777.43 ಕೋಟಿ, ರಫ್ತು ಸಾಲಕ್ಕೆ ₹21.60 ಕೋಟಿ, ಶಿಕ್ಷಣ ಕ್ಷೇತ್ರಕ್ಕೆ ₹23.76 ಕೋಟಿ, ಗೃಹ ನಿರ್ಮಾಣ ಕ್ಷೇತ್ರಕ್ಕೆ ₹117.04 ಕೋಟಿ, ಸಾಮಾಜಿಕ ಮೂಲಸೌಕರ್ಯ ಕ್ಷೇತ್ರಕ್ಕೆ ₹29 ಕೋಟಿ, ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ₹14.03 ಕೋಟಿ, ಇತರ ಕ್ಷೇತ್ರಗಳಿಗೆ ₹92.93 ಕೋಟಿ ಗುರಿ ನಿಗದಿಪಡಿಸಲಾಗಿದೆ.</p>.<p>ವಿವಿಧ ಕ್ಷೇತ್ರಗಳ ಪ್ರಸ್ತುತ ಸ್ಥಿತಿಯನ್ನು ಹಾಗೂ ಶ್ರೇಣೀಕರಿಸಬಹುದಾದ ಸಾಧ್ಯತೆಯನ್ನು ವಿಶ್ಲೇಷಿಸಿ, ಬ್ಯಾಂಕ್ ಸಾಲದ ಮೂಲಕ ಅಭಿವೃದ್ಧಿಯ ಸಾಧ್ಯತೆಗಳನ್ನು ಗುರುತಿಸುವ ಉದ್ದೇಶದಿಂದ ವಿವಿಧ ಕ್ಷೇತ್ರಗಳ ಅಧಿಕಾರಿಗಳು ಮತ್ತು ಪ್ರಮುಖರೊಂದಿಗೆ ಚರ್ಚಿಸಿ ಈ ಪಿಎಲ್ಪಿ ತಯಾರಿಸಲಾಗಿದೆ.</p>.<p>ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಯುವರಾಜಕುಮಾರ ಆರ್.ಎಸ್., ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದ್ಗಲ್, ಎಲ್ಡಿಯಂನ ನಟರಾಜ್, ಎಸ್ಬಿಐ, ಕೆನರಾ ಬ್ಯಾಂಕ್, ಯುಬಿಐ, ಕೆಜಿಬಿ, ಬಳ್ಳಾರಿ ಡಿಸಿಸಿ ಬ್ಯಾಂಕ್ನ ಜಿಲ್ಲಾ ಸಂಯೋಜಕರು, ವಿವಿಧ ಇಲಾಖೆ ಮುಖ್ಯಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>