ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ನ್ಯಾಯಾಲಯದ ಆವರಣದಲ್ಲಿ ವಕೀಲನ ಹತ್ಯೆ; ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

Last Updated 1 ಮಾರ್ಚ್ 2021, 9:27 IST
ಅಕ್ಷರ ಗಾತ್ರ

ವಿಜಯನಗರ (ಹೊಸಪೇಟೆ): ಇಲ್ಲಿನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ (ಫೆ.27) ವಕೀಲ, ಕಾಂಗ್ರೆಸ್ ಮುಖಂಡ ತಾರಿಹಳ್ಳಿ ವೆಂಕಟೇಶ್ (48) ಅವರ ಹತ್ಯೆ ನಡೆದಿತ್ತು. ಅದರ ದೃಶ್ಯ ವಕೀಲರ ಸಂಘದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾರಿಹಳ್ಳಿ ಅವರ ಸಂಬಂಧಿ ಮನೋಜ್ ಎಂಬುವರು ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದ. ಕುರ್ಚಿ ಮೇಲೆ ಕುಳಿತುಕೊಂಡು ನೋಟರಿ ಮಾಡುತ್ತಿದ್ದಾಗ ತಾರಿಹಳ್ಳಿ ಅವರಿಗೆ ಏಕಾಏಕಿ ಬಂದು ಹೊಡೆದಿದ್ದಾನೆ. ಅವರ ದೇಹರಕ್ತಸಿಕ್ತವಾಗಿ ಸ್ಥಳದಲ್ಲೇ ಮೃತಪಟ್ಟರು. ಮಚ್ಚಿನ ಹೊಡೆಯುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿದೆ.

ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜನರು ಭಯದಲ್ಲಿ ದೂರಕ್ಕೆ ಓಡಿರುವುದೂ ಸಿಸಿಟಿವಿ ದೃಶ್ಯಗಳಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT