ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸಿಗರು ಸೇರುವ ಹಂಪಿ ಸ್ಮಾರಕದ ಬಳಿ ಚಿರತೆ ದಾಳಿ: ಕುದುರೆ ಸಾವು

Last Updated 8 ಸೆಪ್ಟೆಂಬರ್ 2022, 5:07 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಚಿರತೆ ದಾಳಿಗೆ ಕುದುರೆ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ತಾಲ್ಲೂಕಿನ ಹಂಪಿ ವಿಜಯ ವಿಠಲ ಬಜಾರ್ ಬಳಿ ನಡೆದಿದೆ.

ದಿನಂತೆ ಕುದುರೆ ವಿಹರಿಸುತ್ತಿತ್ತು. ಈ ವೇಳೆ ಚಿರತೆ ಏಕಾಏಕಿ ಎರಗಿ ಕುದುರೆ ಕತ್ತಿನ ಭಾಗದ ಮೇಲೆ ದಾಳಿ ನಡೆಸಿದ್ದರಿಂದ ಸ್ಥಳದಲ್ಲೇ ಜೀವ ಬಿಟ್ಟಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿಜಯ ವಿಠಲ ದೇವಸ್ಥಾನ ಸಂರಕ್ಷಿತ ಸ್ಮಾರಕವಾಗಿದ್ದು, ಈ ಸ್ಮಾರಕ ಕಣ್ತುಂಬಿಕೊಳ್ಳಲು ನಿತ್ಯ ನೂರಾರು ಜನ ಪ್ರವಾಸಿಗರು ಭೇಟಿ ಕೊಡುತ್ತಾರೆ. ಚಿರತೆ ದಾಳಿ ಆತಂಕಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT