ಸಂಡೂರು (ಬಳ್ಳಾರಿ ಜಿಲ್ಲೆ): ತಾಲ್ಲೂಕಿನ ನಂದಿಹಳ್ಳಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಬುಧವಾರ ಸಂಜೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದರ ವಿಡಿಯೊ ಹರಿದಾಡುತ್ತಿದೆ.
ಚಿರತೆ ಕೇಂದ್ರದ ಒಳಗೆ ಹೋಗಿ ಹೊರ ಬರುವುದು, ಅಲ್ಲಿ ಕಾವಲಿಗೆ ಇದ್ದ ಗೃಹರಕ್ಷಕದಳದ ಸಿಬ್ಬಂದಿ ಹಿಂಬಾಲಿಸಿ ಓಡಿಸುವ ದೃಶ್ಯ ವಿಡಿಯೊದಲ್ಲಿದೆ.
ವಿಷಯ ತಿಳಿದು ಅರಣ್ಯ ಇಲಾಖೆಯವರು ಗುರುವಾರ ಕೇಂದ್ರದ ಬಳಿ ಬೋನುಇಟ್ಟಿದ್ದಾರೆ.