<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನ ಮರಿಯಮ್ಮನಹಳ್ಳಿ ಸಮೀಪದ ಚಿಲಕನಹಟ್ಟಿ ಎಂಬಲ್ಲಿ ಸೋಮವಾರ ಸಂಜೆ ಹೊಸಪೇಟೆ–ಚಿತ್ರದುರ್ಗ ಹೆದ್ದಾರಿ ದಾಟುತ್ತಿದ್ದ ಚಿರತೆಯೊಂದಕ್ಕೆ ವಾಹನವೊಂದು ಡಿಕ್ಕಿ ಹೊಡೆದುದರಿಂದ ಚಿರತೆ ಸ್ಥಳದಲ್ಲೇ ಸತ್ತಿದೆ.</p><p>ಚಿರತೆ ಸತ್ತಿರುವುದನ್ನು ಕಂಡ ಸ್ಥಳೀಯರು ಹಾಗೂ ವಾಹನಗಳಲ್ಲಿ ಸಂಚರಿಸುತ್ತಿದ್ದವರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.</p><p>‘ನಾವೀಗ ಸ್ಥಳದಲ್ಲೇ ಇದ್ದೇವೆ. ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿರುವ ಶಂಕೆ ಇದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಗುತ್ತಿವೆ, ಯಾವ ವಾಹನ ಈ ಚಿರತೆಗೆ ಡಿಕ್ಕಿ ಹೊಡೆಯಿತು ಎಂದು ತಕ್ಷಣಕ್ಕೆ ಅಂದಾಜಿಸಲು ಸಾಧ್ಯವಿಲ್ಲ. ಚಿರತೆಯ ವಯಸ್ಸು, ಇತರ ಮಾಹಿತಿ ತಿಳಿಯುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ವಲಯ ಅರಣ್ಯ ಅಧಿಕಾರಿ ಕೌಶಿಕ್ ದಳವಾಯಿ ‘ಪ್ರಜಾವಾಣಿ’ಗೆ ತಿಳಿಸಿದರು.</p><p><strong>ಸತ್ತಿರುವುದು ಹೆಣ್ಣು ಚಿರತೆ–ಐದು ವರ್ಷ</strong></p><p>ಮರಿಯಮ್ಮನಹಳ್ಳಿ ಸಮೀಪದ ಹಾರುವನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ಹೆದ್ದಾರಿ ದಾಟುತ್ತಿದ್ದಾಗ ಸತ್ತಿರುವ ಚಿರತೆಗೆ ಐದು ವರ್ಷ ಇರಬಹುದು, ಅದು ಹೆಣ್ಣು ಚಿರತೆಯಾಗಿತ್ತು ಎಂದು ಆರ್ಎಫ್ಒ ಕೌಶಿಕ್ ದಳವಾಯಿ ಹೇಳಿದರು.</p><p>ಕಳೆದ ಐದು ವರ್ಷದಲ್ಲಿ ಇದೇ ಹೆದ್ದಾರಿ ಭಾಗದಲ್ಲಿ ವಾಹನಗಳಿಗೆ ಸಿಲುಕಿ ಎರಡು ಚಿರತೆಗಳು ಮತ್ತು ಒಂದು ಕರಡಿ ಸತ್ತಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನ ಮರಿಯಮ್ಮನಹಳ್ಳಿ ಸಮೀಪದ ಚಿಲಕನಹಟ್ಟಿ ಎಂಬಲ್ಲಿ ಸೋಮವಾರ ಸಂಜೆ ಹೊಸಪೇಟೆ–ಚಿತ್ರದುರ್ಗ ಹೆದ್ದಾರಿ ದಾಟುತ್ತಿದ್ದ ಚಿರತೆಯೊಂದಕ್ಕೆ ವಾಹನವೊಂದು ಡಿಕ್ಕಿ ಹೊಡೆದುದರಿಂದ ಚಿರತೆ ಸ್ಥಳದಲ್ಲೇ ಸತ್ತಿದೆ.</p><p>ಚಿರತೆ ಸತ್ತಿರುವುದನ್ನು ಕಂಡ ಸ್ಥಳೀಯರು ಹಾಗೂ ವಾಹನಗಳಲ್ಲಿ ಸಂಚರಿಸುತ್ತಿದ್ದವರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.</p><p>‘ನಾವೀಗ ಸ್ಥಳದಲ್ಲೇ ಇದ್ದೇವೆ. ಸಂಜೆ 7.30ರ ಸುಮಾರಿಗೆ ಈ ಘಟನೆ ನಡೆದಿರುವ ಶಂಕೆ ಇದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಗುತ್ತಿವೆ, ಯಾವ ವಾಹನ ಈ ಚಿರತೆಗೆ ಡಿಕ್ಕಿ ಹೊಡೆಯಿತು ಎಂದು ತಕ್ಷಣಕ್ಕೆ ಅಂದಾಜಿಸಲು ಸಾಧ್ಯವಿಲ್ಲ. ಚಿರತೆಯ ವಯಸ್ಸು, ಇತರ ಮಾಹಿತಿ ತಿಳಿಯುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ವಲಯ ಅರಣ್ಯ ಅಧಿಕಾರಿ ಕೌಶಿಕ್ ದಳವಾಯಿ ‘ಪ್ರಜಾವಾಣಿ’ಗೆ ತಿಳಿಸಿದರು.</p><p><strong>ಸತ್ತಿರುವುದು ಹೆಣ್ಣು ಚಿರತೆ–ಐದು ವರ್ಷ</strong></p><p>ಮರಿಯಮ್ಮನಹಳ್ಳಿ ಸಮೀಪದ ಹಾರುವನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ಹೆದ್ದಾರಿ ದಾಟುತ್ತಿದ್ದಾಗ ಸತ್ತಿರುವ ಚಿರತೆಗೆ ಐದು ವರ್ಷ ಇರಬಹುದು, ಅದು ಹೆಣ್ಣು ಚಿರತೆಯಾಗಿತ್ತು ಎಂದು ಆರ್ಎಫ್ಒ ಕೌಶಿಕ್ ದಳವಾಯಿ ಹೇಳಿದರು.</p><p>ಕಳೆದ ಐದು ವರ್ಷದಲ್ಲಿ ಇದೇ ಹೆದ್ದಾರಿ ಭಾಗದಲ್ಲಿ ವಾಹನಗಳಿಗೆ ಸಿಲುಕಿ ಎರಡು ಚಿರತೆಗಳು ಮತ್ತು ಒಂದು ಕರಡಿ ಸತ್ತಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>