<p><strong>ಸಿರುಗುಪ್ಪ:</strong> ‘ಪರಿಸರವನ್ನು ನಮ್ಮ ಸ್ವಾರ್ಥಕ್ಕಾಗಿ ನಿತ್ಯ ನಾಶ ಮಾಡುತ್ತಿದ್ದೇವೆ. ಪ್ರಕೃತಿ ವಿಕೋಪಗಳು ಹೆಚ್ಚಾಗಿ ಸಂಭವಿಸಲು ಅದೇ ಕಾರಣವಾಗಿದೆ. ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸೋಣ, ಪರಿಸರ ಸಂರಕ್ಷಿಸೋಣ’ ಎಂದು ಸಿವಿಲ್ ನ್ಯಾಯಾಧೀಶ ಅಶೋಕ್ ಆರ್.ಎಚ್. ಹೇಳಿದರು.</p>.<p>ನಗರದ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಗುರುವಾರ ನಡೆದ ವಿಶ್ವ ಪರಿಸರ ದಿಣಾಚರಣೆಯಲ್ಲಿ ಮಾತನಾಡಿದರು.</p>.<p>‘ಪ್ರಕೃತಿಯು ನಮಗೆ ಕೊಡುವುದನ್ನು ನಾವು ಆನಂದಿಸುತ್ತೇವೆ. ಅದನ್ನು ರಕ್ಷಿಸುವ ಜವಾಬ್ದಾರಿಯನ್ನು ಮರೆಯಬಾರದು. ಪರಿಸರ ಉಳಿಸುವುದು ನಮ್ಮ ಮುಂದಿನ ಪೀಳಿಗೆಯ ಭದ್ರತೆಗಾಗಿ’ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೊಬ ಅರಣ್ಯ ರಕ್ಷಣೆ ಮತ್ತು ನಾಶಕ್ಕೆ ಸಂಬಂಧಿಸಿದ ಕಾನೂನುಗಳ ಮಾಹಿತಿ ನೀಡಿದರು. ಉಪವಲಯ ಅರಣ್ಯಾಧಿಕಾರಿ ರಾಜ ಅಂಬಣ್ಣ ನಾಯಕ ಅರಣ್ಯದಿಂದಾಗುವ ಉಪಯೋಗಗಳು ಮತ್ತು ವಿಕೋಪಗಳ ಕುರಿತು ವಿವರಿಸಿದರು.</p>.<p>ಶಿರಸ್ತೆದಾರ ಸಿದ್ಧಾರ್ಥ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಕೌಶಿಕ್ ದಳವಾಯಿ, ಪ್ರಾಂಶುಪಾಲ ಜಿ.ಸಿದ್ದಲಿಂಗಯ್ಯ, ವಕೀಲರಾದ ಮಲ್ಲನಗೌಡ, ವೆಂಕಟೇಶ ನಾಯ್ಕ, ಅಬ್ದುಲ್ ಸಾಬ್ ರಾರಾವಿ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ‘ಪರಿಸರವನ್ನು ನಮ್ಮ ಸ್ವಾರ್ಥಕ್ಕಾಗಿ ನಿತ್ಯ ನಾಶ ಮಾಡುತ್ತಿದ್ದೇವೆ. ಪ್ರಕೃತಿ ವಿಕೋಪಗಳು ಹೆಚ್ಚಾಗಿ ಸಂಭವಿಸಲು ಅದೇ ಕಾರಣವಾಗಿದೆ. ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸೋಣ, ಪರಿಸರ ಸಂರಕ್ಷಿಸೋಣ’ ಎಂದು ಸಿವಿಲ್ ನ್ಯಾಯಾಧೀಶ ಅಶೋಕ್ ಆರ್.ಎಚ್. ಹೇಳಿದರು.</p>.<p>ನಗರದ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಗುರುವಾರ ನಡೆದ ವಿಶ್ವ ಪರಿಸರ ದಿಣಾಚರಣೆಯಲ್ಲಿ ಮಾತನಾಡಿದರು.</p>.<p>‘ಪ್ರಕೃತಿಯು ನಮಗೆ ಕೊಡುವುದನ್ನು ನಾವು ಆನಂದಿಸುತ್ತೇವೆ. ಅದನ್ನು ರಕ್ಷಿಸುವ ಜವಾಬ್ದಾರಿಯನ್ನು ಮರೆಯಬಾರದು. ಪರಿಸರ ಉಳಿಸುವುದು ನಮ್ಮ ಮುಂದಿನ ಪೀಳಿಗೆಯ ಭದ್ರತೆಗಾಗಿ’ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಉಪ್ಪಾರ ವೆಂಕೊಬ ಅರಣ್ಯ ರಕ್ಷಣೆ ಮತ್ತು ನಾಶಕ್ಕೆ ಸಂಬಂಧಿಸಿದ ಕಾನೂನುಗಳ ಮಾಹಿತಿ ನೀಡಿದರು. ಉಪವಲಯ ಅರಣ್ಯಾಧಿಕಾರಿ ರಾಜ ಅಂಬಣ್ಣ ನಾಯಕ ಅರಣ್ಯದಿಂದಾಗುವ ಉಪಯೋಗಗಳು ಮತ್ತು ವಿಕೋಪಗಳ ಕುರಿತು ವಿವರಿಸಿದರು.</p>.<p>ಶಿರಸ್ತೆದಾರ ಸಿದ್ಧಾರ್ಥ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಕೌಶಿಕ್ ದಳವಾಯಿ, ಪ್ರಾಂಶುಪಾಲ ಜಿ.ಸಿದ್ದಲಿಂಗಯ್ಯ, ವಕೀಲರಾದ ಮಲ್ಲನಗೌಡ, ವೆಂಕಟೇಶ ನಾಯ್ಕ, ಅಬ್ದುಲ್ ಸಾಬ್ ರಾರಾವಿ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>