ಸಮಾಧಿಗಳ ಬಳಿ ದೀಪ ಬೆಳಗಿಸಿ, ಪ್ರಾರ್ಥನೆ ಮಾಡಿ, ಇಷ್ಟಲಿಂಗ ಪೂಜೆ ಮಾಡಿದರು. ಬಳಿಕ ಅಲ್ಲೇ ಪ್ರಸಾದ ಸ್ವೀಕರಿಸಿದರು. ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ಅಜಯ್ ಕುಮಾರ್ ತಾಂಡೂರ್ ಮಾತನಾಡಿ, ಸಾವು ಮತ್ತು ಸ್ಮಶಾನದ ಬಗ್ಗೆ ಇರುವ ಮೌಢ್ಯವನ್ನು ಹೋಗಲಾಡಿಸಲು ಪ್ರತಿವರ್ಷ ಶಿವರಾತ್ರಿಯ ದಿನ ಸ್ಮಶಾನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಈ ಮೂಲಕ ಹಿರಿಯ ಚೇತನಗಳಿಗೆ ಗೌರವ ಸಮರ್ಪಿಸಲಾಗುತ್ತಿದೆ ಎಂದರು.