<p><strong>ಹೊಸಪೇಟೆ (ವಿಜಯನಗರ):</strong> ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಸಮೀಕ್ಷೆಗೆ ಮುಂದಾಗಿದೆ, ಲಿಂಗಾಯತ ಸಮುದಾಯದವರು 1999ಕ್ಕಿಂತ ಮೊದಲು ತಮ್ಮ ಜಾತಿ ಪ್ರಮಾಣಪತ್ರದಲ್ಲಿ ಎನಿತ್ತೋ ಅದನ್ನೇ ನಮೂದಿಸಬೇಕು ಎಂದು ಚಿಕ್ಕಮಗಳೂರು ಬಸವತತ್ವ ಪೀಠದ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.</p>.<p>ಇಲ್ಲಿ ಭಾನುವಾರ ಸಂಜೆ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದರಲ್ಲದೆ, ಧರ್ಮ ಕಾಲಂನಲ್ಲಿ ಲಿಂಗಾಯತ ಎಂದೇ ಬರೆಯಬೇಕು ಎಂದು ಹೇಳಿದರು.</p>.<p>ಕೊಟ್ಟೂರು ಸಂಸ್ಥಾನಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ಬಸವಣ್ಣನವರ ಚರಿತ್ರೆಯನ್ನು ತಿಳಿದುಕೊಳ್ಳುವ ಅಗತ್ಯ ಇಲ್ಲ, ಬಸವಣ್ಣನವರ ಆದರ್ಶ, ಸಂದೇಶಗಳನ್ನು ಮುಂದಿಟ್ಟುಕೊಂಡು ನಮ್ಮನ್ನು ನಾವು ತಿಳಿದುಕೊಳ್ಳುವ ಪ್ರಯತ್ಬ ನಡೆಯಬೇಕು ಎಂದರು.</p>.<p>ಹುಬ್ಬಳ್ಳಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಮೈತ್ರೇಯಿಣಿ ಗದಿಗೆಪ್ಪಗೌಡರ ವಿಶೇಷ ಉಪನ್ಯಾಸ ನೀಡಿದರು. ಕೊಪ್ಪಳದ ರಶ್ಮಿ ಹಿಟ್ನಾಳ್ ಮಾತನಾಡಿದರು. ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಸಹಿತ ಹಲವು ಮಠಗಳ ಶ್ರೀಗಳು ಇದ್ದರು. </p>.<p>ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಸಾಣೆಹಳ್ಳಿಯ ಶಿವಸಂಚಾರ ಕಲಾ ತಂಡದವರಿಂದ ‘ಜಂಗಮದೆಡೆಗೆ’ ನಾಟಕ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಸಮೀಕ್ಷೆಗೆ ಮುಂದಾಗಿದೆ, ಲಿಂಗಾಯತ ಸಮುದಾಯದವರು 1999ಕ್ಕಿಂತ ಮೊದಲು ತಮ್ಮ ಜಾತಿ ಪ್ರಮಾಣಪತ್ರದಲ್ಲಿ ಎನಿತ್ತೋ ಅದನ್ನೇ ನಮೂದಿಸಬೇಕು ಎಂದು ಚಿಕ್ಕಮಗಳೂರು ಬಸವತತ್ವ ಪೀಠದ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.</p>.<p>ಇಲ್ಲಿ ಭಾನುವಾರ ಸಂಜೆ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದರಲ್ಲದೆ, ಧರ್ಮ ಕಾಲಂನಲ್ಲಿ ಲಿಂಗಾಯತ ಎಂದೇ ಬರೆಯಬೇಕು ಎಂದು ಹೇಳಿದರು.</p>.<p>ಕೊಟ್ಟೂರು ಸಂಸ್ಥಾನಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ಬಸವಣ್ಣನವರ ಚರಿತ್ರೆಯನ್ನು ತಿಳಿದುಕೊಳ್ಳುವ ಅಗತ್ಯ ಇಲ್ಲ, ಬಸವಣ್ಣನವರ ಆದರ್ಶ, ಸಂದೇಶಗಳನ್ನು ಮುಂದಿಟ್ಟುಕೊಂಡು ನಮ್ಮನ್ನು ನಾವು ತಿಳಿದುಕೊಳ್ಳುವ ಪ್ರಯತ್ಬ ನಡೆಯಬೇಕು ಎಂದರು.</p>.<p>ಹುಬ್ಬಳ್ಳಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಮೈತ್ರೇಯಿಣಿ ಗದಿಗೆಪ್ಪಗೌಡರ ವಿಶೇಷ ಉಪನ್ಯಾಸ ನೀಡಿದರು. ಕೊಪ್ಪಳದ ರಶ್ಮಿ ಹಿಟ್ನಾಳ್ ಮಾತನಾಡಿದರು. ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಸಹಿತ ಹಲವು ಮಠಗಳ ಶ್ರೀಗಳು ಇದ್ದರು. </p>.<p>ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಸಾಣೆಹಳ್ಳಿಯ ಶಿವಸಂಚಾರ ಕಲಾ ತಂಡದವರಿಂದ ‘ಜಂಗಮದೆಡೆಗೆ’ ನಾಟಕ ಪ್ರದರ್ಶನಗೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>