<p><strong>ಹೊಸಪೇಟೆ (ವಿಜಯನಗರ):</strong> ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಮಾಡುವುದಕ್ಕೆ ಅಗತ್ಯ ಸೇವೆಗಳ ಸಿಬ್ಬಂದಿಗೆ ಹಾಗೂ ಖಾಸಗಿ ವಲಯಗಳ ಕೆಲವು ಸಿಬ್ಬಂದಿಗೆ ಅವಕಾಶ ಇದ್ದು, ಅದನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದರು.</p>.<p>ತಮ್ಮ ಕಚೇರಿಯಲ್ಲಿ ಗುರುವಾರ ಸಂಜೆ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಪೊಲೀಸ್, ಕೆಎಸ್ಆರ್ಟಿಸಿ, ರೈಲ್ವೆ, ಆರೋಗ್ಯ ಇಲಾಖೆ, ಆಕಾಶವಾಣಿ, ಅಗ್ನಿಶಾಮಕ, ಆಂಬುಲೆನ್ಸ್ ಸೇವೆ ಸೇರಿದಂತೆ ವಿವಿಧ ಎವಿಇಎಸ್ ಕೆಟಗರಿಯವರಿಗೆ ಅಂಚೆ ಮತ ಚೀಟಿ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ನಿಗದಿತ ನಮೂನೆಯನ್ನು ಅರ್ಜಿ ಭರ್ತಿ ಮಾಡಿ ಅಂಚೆ ಮತಪತ್ರ ನೋಡಲ್ ಅಧಿಕಾರಿಗೆ ಸಲ್ಲಿಸುವ ಕಾರ್ಯವನ್ನು ಅತೀ ತುರ್ತಾಗಿ ಮಾಡಲು ಕ್ರಮ ವಹಿಸಬೇಕು ಎಂದರು.</p>.<p>ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎಇಓ, ಎಟಿ, ಎಫ್ಎಸ್ಟಿ, ವಿಎಸ್ಟಿ, ವಿವಿಟಿ ತಂಡಗಳನ್ನು ರಚಿಸಿ ಆದೇಶಿಸಲಾಗಿದ್ದು ಈ ಎಲ್ಲ ತಂಡಗಳಲ್ಲಿನ ಅಧಿಕಾರಿಗಳು ಮುತುವರ್ಜಿವಹಿಸಿ ಕೆಲಸ ನಿರ್ವಹಿಸಬೇಕು. ಈಗಾಗಲೇ ಆರಂಭವಾಗಿರುವ ಕಂಟ್ರೊಲ್ ರೂಮ್, ದೂರು ಮೇಲ್ವಿಚಾರಣಾ ಕೇಂದ್ರ, ಮಾಧ್ಯಮ ಸೇರಿದಂತೆ ವಿವಿಧ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.</p>.<p>ಯಾವುದೇ ಕಡೆಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳು ನಡೆಯದಂತೆ ಮುನ್ನೆಚ್ಚರಿಕೆ ಮತ್ತು ತಿಳಿವಳಿಕೆ ನೀಡಬೇಕು. ಸಭೆ-ಸಮಾರಂಭಗಳಿಗೆ ಅನುಮತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಡ್ಡಾಯವಾಗಿ ಷರತ್ತುಗಳನ್ನು ವಿಧಿಸಿ ಅನುಮತಿ ಪತ್ರ ನೀಡಬೇಕು ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧಾ ಜಿ., ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಮತ್ತು ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಇದ್ದರು.</p>.<p><strong>‘ಕಾಸಿಗಾಗಿ ಸುದ್ದಿ–ನಿಗಾ ವಹಿಸಿ’</strong> </p><p>ಮಾಧ್ಯಮಗಳಲ್ಲಿ ಪ್ರಕಟವಾಗುವ ಕಾಸಿಗಾಗಿ ಸುದ್ದಿಗಳ ಮೇಲೆ ವಿಶೇಷ ನಿಗಾವಹಿಸಬೇಕು. ಜಿಲ್ಲಾಮಟ್ಟದ ಮಾಧ್ಯಮ ಪ್ರಮಾಣೀಕರಣ ಮತ್ತು ಉಸ್ತುವಾರಿ ಸಮಿತಿಗಳು ಪೇಡ್ ನ್ಯೂಸ್ ಸಾಪ್ತಾಹಿಕ ವರದಿಯನ್ನು ನಿಗದಿತ ಅವಧಿಯೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಚೆಕ್ಪೋಸ್ಟ್ಗಳಲ್ಲಿ ವಾಹನಗಳ ತಪಾಸಣಾ ಕ್ರಮವನ್ನು ಬಿಗಿಗೊಳಿಸಬೇಕು. ₹50 ಸಾವಿರ ಅಥವಾ ಅದಕ್ಕಿಂತ ಹೆಚ್ಚು ಹಣ ಒಯ್ಯುವವರು ಸಮರ್ಪಕ ದಾಖಲೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಧರಿಸಿದ ಆಭರಣ ಹೊರತುಪಡಿಸಿ ದೊರೆಯುವ ಅಧಿಕ ಬೆಳೆಬಾಳುವ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲು ಕ್ರಮ ವಹಿಸಬೇಕು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಮಾಡುವುದಕ್ಕೆ ಅಗತ್ಯ ಸೇವೆಗಳ ಸಿಬ್ಬಂದಿಗೆ ಹಾಗೂ ಖಾಸಗಿ ವಲಯಗಳ ಕೆಲವು ಸಿಬ್ಬಂದಿಗೆ ಅವಕಾಶ ಇದ್ದು, ಅದನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದರು.</p>.<p>ತಮ್ಮ ಕಚೇರಿಯಲ್ಲಿ ಗುರುವಾರ ಸಂಜೆ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಪೊಲೀಸ್, ಕೆಎಸ್ಆರ್ಟಿಸಿ, ರೈಲ್ವೆ, ಆರೋಗ್ಯ ಇಲಾಖೆ, ಆಕಾಶವಾಣಿ, ಅಗ್ನಿಶಾಮಕ, ಆಂಬುಲೆನ್ಸ್ ಸೇವೆ ಸೇರಿದಂತೆ ವಿವಿಧ ಎವಿಇಎಸ್ ಕೆಟಗರಿಯವರಿಗೆ ಅಂಚೆ ಮತ ಚೀಟಿ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ನಿಗದಿತ ನಮೂನೆಯನ್ನು ಅರ್ಜಿ ಭರ್ತಿ ಮಾಡಿ ಅಂಚೆ ಮತಪತ್ರ ನೋಡಲ್ ಅಧಿಕಾರಿಗೆ ಸಲ್ಲಿಸುವ ಕಾರ್ಯವನ್ನು ಅತೀ ತುರ್ತಾಗಿ ಮಾಡಲು ಕ್ರಮ ವಹಿಸಬೇಕು ಎಂದರು.</p>.<p>ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎಇಓ, ಎಟಿ, ಎಫ್ಎಸ್ಟಿ, ವಿಎಸ್ಟಿ, ವಿವಿಟಿ ತಂಡಗಳನ್ನು ರಚಿಸಿ ಆದೇಶಿಸಲಾಗಿದ್ದು ಈ ಎಲ್ಲ ತಂಡಗಳಲ್ಲಿನ ಅಧಿಕಾರಿಗಳು ಮುತುವರ್ಜಿವಹಿಸಿ ಕೆಲಸ ನಿರ್ವಹಿಸಬೇಕು. ಈಗಾಗಲೇ ಆರಂಭವಾಗಿರುವ ಕಂಟ್ರೊಲ್ ರೂಮ್, ದೂರು ಮೇಲ್ವಿಚಾರಣಾ ಕೇಂದ್ರ, ಮಾಧ್ಯಮ ಸೇರಿದಂತೆ ವಿವಿಧ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.</p>.<p>ಯಾವುದೇ ಕಡೆಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳು ನಡೆಯದಂತೆ ಮುನ್ನೆಚ್ಚರಿಕೆ ಮತ್ತು ತಿಳಿವಳಿಕೆ ನೀಡಬೇಕು. ಸಭೆ-ಸಮಾರಂಭಗಳಿಗೆ ಅನುಮತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಡ್ಡಾಯವಾಗಿ ಷರತ್ತುಗಳನ್ನು ವಿಧಿಸಿ ಅನುಮತಿ ಪತ್ರ ನೀಡಬೇಕು ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧಾ ಜಿ., ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಮತ್ತು ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಇದ್ದರು.</p>.<p><strong>‘ಕಾಸಿಗಾಗಿ ಸುದ್ದಿ–ನಿಗಾ ವಹಿಸಿ’</strong> </p><p>ಮಾಧ್ಯಮಗಳಲ್ಲಿ ಪ್ರಕಟವಾಗುವ ಕಾಸಿಗಾಗಿ ಸುದ್ದಿಗಳ ಮೇಲೆ ವಿಶೇಷ ನಿಗಾವಹಿಸಬೇಕು. ಜಿಲ್ಲಾಮಟ್ಟದ ಮಾಧ್ಯಮ ಪ್ರಮಾಣೀಕರಣ ಮತ್ತು ಉಸ್ತುವಾರಿ ಸಮಿತಿಗಳು ಪೇಡ್ ನ್ಯೂಸ್ ಸಾಪ್ತಾಹಿಕ ವರದಿಯನ್ನು ನಿಗದಿತ ಅವಧಿಯೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಚೆಕ್ಪೋಸ್ಟ್ಗಳಲ್ಲಿ ವಾಹನಗಳ ತಪಾಸಣಾ ಕ್ರಮವನ್ನು ಬಿಗಿಗೊಳಿಸಬೇಕು. ₹50 ಸಾವಿರ ಅಥವಾ ಅದಕ್ಕಿಂತ ಹೆಚ್ಚು ಹಣ ಒಯ್ಯುವವರು ಸಮರ್ಪಕ ದಾಖಲೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಧರಿಸಿದ ಆಭರಣ ಹೊರತುಪಡಿಸಿ ದೊರೆಯುವ ಅಧಿಕ ಬೆಳೆಬಾಳುವ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲು ಕ್ರಮ ವಹಿಸಬೇಕು ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>