ತಮ್ಮ ಕಚೇರಿಯಲ್ಲಿ ಗುರುವಾರ ಸಂಜೆ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಪೊಲೀಸ್, ಕೆಎಸ್ಆರ್ಟಿಸಿ, ರೈಲ್ವೆ, ಆರೋಗ್ಯ ಇಲಾಖೆ, ಆಕಾಶವಾಣಿ, ಅಗ್ನಿಶಾಮಕ, ಆಂಬುಲೆನ್ಸ್ ಸೇವೆ ಸೇರಿದಂತೆ ವಿವಿಧ ಎವಿಇಎಸ್ ಕೆಟಗರಿಯವರಿಗೆ ಅಂಚೆ ಮತ ಚೀಟಿ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ನಿಗದಿತ ನಮೂನೆಯನ್ನು ಅರ್ಜಿ ಭರ್ತಿ ಮಾಡಿ ಅಂಚೆ ಮತಪತ್ರ ನೋಡಲ್ ಅಧಿಕಾರಿಗೆ ಸಲ್ಲಿಸುವ ಕಾರ್ಯವನ್ನು ಅತೀ ತುರ್ತಾಗಿ ಮಾಡಲು ಕ್ರಮ ವಹಿಸಬೇಕು ಎಂದರು.