ಪಟ್ಟಣದ ಪುರಸಭೆ ಕಾರ್ಯಾಲಯ, ಕುಡಿಯುವ ನೀರು ಶುದ್ದೀಕರಣ ಘಟಕ, ನೀರು ಪೂರೈಕೆ ಮಾಡುವ ಕೆರೆ, ಘನತ್ಯಾಜ್ಯ ವಿಲೇವಾರ ಘಟಕಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ,‘ಪುರಸಭೆ ಆಡಳಿತ ಸಮರ್ಪಕವಾಗಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ’ ಎಂದು ಲೋಕಾಯುಕ್ತ ಎಸ್.ಪಿ ಟಿ.ಮಲ್ಲೇಶ್ ಅಸಮಾಧಾನ ವ್ಯಕ್ತಪಡಿಸಿದರು.