<p><strong>ಹೊಸಪೇಟೆ (ವಿಜಯನಗರ):</strong> ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಡಿಎಚ್ಒ) ಡಾ.ಎಲ್.ಆರ್.ಶಂಕರ್ ನಾಯ್ಕ್ ಅವರ ಬಳಿ ನಿಗದಿತ ಆಸ್ತಿಗಿಂತ ಹೆಚ್ಚುವರಿಯಾಗಿ ₹4.89 ಕೋಟಿ ಮೌಲ್ಯದ ಆಸ್ತಿ ಇರುವುದು ಪತ್ತೆಯಾಗಿದೆ ಎಂದು ಲೋಕಯುಕ್ತ ಪ್ರಕಟಣೆ ತಿಳಿಸಿದೆ.</p>.ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆಯ 24ನೇ ಗೇಟ್ ತೆರವು ಆರಂಭ– ವೇಗ ಪಡೆದ ಕೆಲಸ.<p>ಡಿಎಚ್ಒ ಅವರಿಗೆ ಸಂಬಂಧಿಸಿದ 4 ಕಡೆಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿತ್ತು. ಆಗ ₹4.20 ಕೋಟಿ ಮೌಲ್ಯದ 11 ನಿವೇಶನಗಳು, ಐದು ವಾಸದ ಮನೆಗಳು (ಸ್ಥಿರಾಸ್ತಿ) ಪತ್ತೆಯಾಗಿವೆ. ₹69.82 ಲಕ್ಷ ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. ಇದರಲ್ಲಿ ₹15.56 ಲಕ್ಷ ನಗದು, ₹16.75 ಲಕ್ಷ ಮೌಲ್ಯದ ಚಿನ್ನಾಭರಣ, ₹9.60 ಲಕ್ಷ ಮೌಲ್ಯದ ವಾಹನಗಳು, ₹31.90 ಲಕ್ಷ ಮೌಲ್ಯದ ಪೀಠೋಪಕರಣ ಮತ್ತು ಇತರ ವಸ್ತುಗಳು ಸೇರಿವೆ ಎಂದು ತಿಳಿಸಲಾಗಿದೆ.</p><p>ವಿಜಯನಗರ ಲೋಕಾಯುಕ್ತ ಡಿವೈಎಸ್ಪಿ ಸಚಿನ್, ಇನ್ಸ್ಪೆಕ್ಟರ್ಗಳಾದ ಅಮರೇಶ್, ರಾಜೇಶ್ ಲಮಾಣಿ ಮತ್ತು ಕೊಪ್ಪಳ, ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳವಾರ ನಸುಕಿನಲ್ಲೇ ಶೋಧ ಕಾರ್ಯಾಚರಣೆ ಆರಂಭವಾಗಿತ್ತು. ಅದು ಸಂಜೆಯತನಕವೂ ಮುಂದುವರಿದಿತ್ತು.</p><p>ಅಕ್ರಮ ಅಸ್ತಿ ಸಂಪಾದನೆ ಕುರಿತಂತೆ ಡಿಎಚ್ಒ ವಿರುದ್ಧ ಹೊಸಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.ಹೊಸಪೇಟೆ: ಶಾಲೆಯಲ್ಲಿ ಕಂಡ ಶಾಂತಿಯ ಪಾಠ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಡಿಎಚ್ಒ) ಡಾ.ಎಲ್.ಆರ್.ಶಂಕರ್ ನಾಯ್ಕ್ ಅವರ ಬಳಿ ನಿಗದಿತ ಆಸ್ತಿಗಿಂತ ಹೆಚ್ಚುವರಿಯಾಗಿ ₹4.89 ಕೋಟಿ ಮೌಲ್ಯದ ಆಸ್ತಿ ಇರುವುದು ಪತ್ತೆಯಾಗಿದೆ ಎಂದು ಲೋಕಯುಕ್ತ ಪ್ರಕಟಣೆ ತಿಳಿಸಿದೆ.</p>.ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆಯ 24ನೇ ಗೇಟ್ ತೆರವು ಆರಂಭ– ವೇಗ ಪಡೆದ ಕೆಲಸ.<p>ಡಿಎಚ್ಒ ಅವರಿಗೆ ಸಂಬಂಧಿಸಿದ 4 ಕಡೆಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿತ್ತು. ಆಗ ₹4.20 ಕೋಟಿ ಮೌಲ್ಯದ 11 ನಿವೇಶನಗಳು, ಐದು ವಾಸದ ಮನೆಗಳು (ಸ್ಥಿರಾಸ್ತಿ) ಪತ್ತೆಯಾಗಿವೆ. ₹69.82 ಲಕ್ಷ ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. ಇದರಲ್ಲಿ ₹15.56 ಲಕ್ಷ ನಗದು, ₹16.75 ಲಕ್ಷ ಮೌಲ್ಯದ ಚಿನ್ನಾಭರಣ, ₹9.60 ಲಕ್ಷ ಮೌಲ್ಯದ ವಾಹನಗಳು, ₹31.90 ಲಕ್ಷ ಮೌಲ್ಯದ ಪೀಠೋಪಕರಣ ಮತ್ತು ಇತರ ವಸ್ತುಗಳು ಸೇರಿವೆ ಎಂದು ತಿಳಿಸಲಾಗಿದೆ.</p><p>ವಿಜಯನಗರ ಲೋಕಾಯುಕ್ತ ಡಿವೈಎಸ್ಪಿ ಸಚಿನ್, ಇನ್ಸ್ಪೆಕ್ಟರ್ಗಳಾದ ಅಮರೇಶ್, ರಾಜೇಶ್ ಲಮಾಣಿ ಮತ್ತು ಕೊಪ್ಪಳ, ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳವಾರ ನಸುಕಿನಲ್ಲೇ ಶೋಧ ಕಾರ್ಯಾಚರಣೆ ಆರಂಭವಾಗಿತ್ತು. ಅದು ಸಂಜೆಯತನಕವೂ ಮುಂದುವರಿದಿತ್ತು.</p><p>ಅಕ್ರಮ ಅಸ್ತಿ ಸಂಪಾದನೆ ಕುರಿತಂತೆ ಡಿಎಚ್ಒ ವಿರುದ್ಧ ಹೊಸಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.ಹೊಸಪೇಟೆ: ಶಾಲೆಯಲ್ಲಿ ಕಂಡ ಶಾಂತಿಯ ಪಾಠ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>