ಕಾನಹೊಸಹಳ್ಳಿ : ಇಲ್ಲಿ ಸೋಮವಾರ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ರಾಣೆಬೆನ್ನೂರಿನ ವಲಯ ಅರಣ್ಯಾಧಿಕಾರಿ ಮಹಾಂತೇಶ್ ಅವರ ಪತ್ನಿ ಹೇಮಾವತಿ ಅವರ ಹೆಸರಿಗಿರುವ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ.
ಬೆಳಿಗ್ಗೆ ಐದು ಗಂಟೆಯಿಂದ ಪರಿಶೀಲನೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು, ಹೇಮಾವತಿ ಅವರ ತಂದೆ ಮುದ್ದಪ್ಪರ ತಿಪ್ಪೇಸ್ವಾಮಿ ಅವರೊಂದಿಗೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ದಾವಣಗೆರೆಯ ಲೋಕಾಯುಕ್ತ ಇನ್ಸ್ ಪೆಕ್ಟರ್ ಮಧಸೂಧನ್ ಸಿ. ನೇತೃತ್ವದ ಎಂಟು ಜನರ ತಂಡ ದಾಳಿ ಮಾಡಿದೆ.