<p><strong>ಹೊಸಪೇಟೆ(ವಿಜಯನಗರ)</strong>: ಬುಧವಾರದಿಂದ (ಜೂ. 2) ಜಾರಿಗೆ ಬರುವಂತೆ ಜಿಲ್ಲೆಯಲ್ಲಿ ನಾಲ್ಕು ದಿನ ಬ್ಯಾಂಕುಗಳು ಮುಚ್ಚಿರುವುದರಿಂದ ಮಂಗಳವಾರ ನಗರದ ವಿವಿಧ ಬ್ಯಾಂಕುಗಳಲ್ಲಿ ಜನದಟ್ಟಣೆ ಕಂಡು ಬಂತು.</p>.<p>ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಯಲು ಜಿಲ್ಲಾಡಳಿತ ಜನರ ಓಡಾಟ ನಿಯಂತ್ರಿಸಲು ಮುಂದಾಗಿದೆ. ಅದರ ಭಾಗವಾಗಿ ಎಲ್ಲ ಬ್ಯಾಂಕುಗಳನ್ನು ನಾಲ್ಕು ದಿನ ಮುಚ್ಚಲು ಸೋಮವಾರ ಆದೇಶ ಹೊರಡಿಸಿತು. ಈ ವಿಷಯ ತಿಳಿದು ಮಂಗಳವಾರ ಬೆಳಿಗ್ಗೆಯೇ ಜನ ವಿವಿಧ ಬ್ಯಾಂಕುಗಳಿಗೆ ಬಂದಿದ್ದರು.</p>.<p>ಬಿಸಿಲು ಏರುತ್ತಿದ್ದಂತೆ ಉದ್ದನೆಯ ಸಾಲಿನಲ್ಲಿ ಜನ ಹಣ ಬಿಡಿಸಿಕೊಳ್ಳಲು ನಿಂತಿದ್ದರು. ರಾಷ್ಟ್ರೀಕೃತ, ವಾಣಿಜ್ಯ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಎದುರು ಗ್ರಾಹಕರ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಅಂತರ ಕಾಯ್ದುಕೊಳ್ಳದೆ ಜನ ನಿಂತಿರುವುದು ಕಂಡು ಬಂತು. ಎಟಿಎಂಗಳಿಂದ ಎಂದಿನಂತೆ ಜನ ಹಣ ಬಿಡಿಸಿಕೊಳ್ಳಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ)</strong>: ಬುಧವಾರದಿಂದ (ಜೂ. 2) ಜಾರಿಗೆ ಬರುವಂತೆ ಜಿಲ್ಲೆಯಲ್ಲಿ ನಾಲ್ಕು ದಿನ ಬ್ಯಾಂಕುಗಳು ಮುಚ್ಚಿರುವುದರಿಂದ ಮಂಗಳವಾರ ನಗರದ ವಿವಿಧ ಬ್ಯಾಂಕುಗಳಲ್ಲಿ ಜನದಟ್ಟಣೆ ಕಂಡು ಬಂತು.</p>.<p>ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಯಲು ಜಿಲ್ಲಾಡಳಿತ ಜನರ ಓಡಾಟ ನಿಯಂತ್ರಿಸಲು ಮುಂದಾಗಿದೆ. ಅದರ ಭಾಗವಾಗಿ ಎಲ್ಲ ಬ್ಯಾಂಕುಗಳನ್ನು ನಾಲ್ಕು ದಿನ ಮುಚ್ಚಲು ಸೋಮವಾರ ಆದೇಶ ಹೊರಡಿಸಿತು. ಈ ವಿಷಯ ತಿಳಿದು ಮಂಗಳವಾರ ಬೆಳಿಗ್ಗೆಯೇ ಜನ ವಿವಿಧ ಬ್ಯಾಂಕುಗಳಿಗೆ ಬಂದಿದ್ದರು.</p>.<p>ಬಿಸಿಲು ಏರುತ್ತಿದ್ದಂತೆ ಉದ್ದನೆಯ ಸಾಲಿನಲ್ಲಿ ಜನ ಹಣ ಬಿಡಿಸಿಕೊಳ್ಳಲು ನಿಂತಿದ್ದರು. ರಾಷ್ಟ್ರೀಕೃತ, ವಾಣಿಜ್ಯ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಎದುರು ಗ್ರಾಹಕರ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಅಂತರ ಕಾಯ್ದುಕೊಳ್ಳದೆ ಜನ ನಿಂತಿರುವುದು ಕಂಡು ಬಂತು. ಎಟಿಎಂಗಳಿಂದ ಎಂದಿನಂತೆ ಜನ ಹಣ ಬಿಡಿಸಿಕೊಳ್ಳಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>