ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಗಣೇಶ, ಆಂಜನೇಯ ಹಾಗೂ ಬನ್ನಿ ಮಹಾಂಕಾಳಮ್ಮ ದೇವಿ ಮೂರ್ತಿಗಳನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು. ಪೂರ್ಣಕುಂಭ ಹೊತ್ತು ಮಹಿಳೆಯರು ಹೆಜ್ಜೆ ಹಾಕಿದರು. ಶುಕ್ರವಾರ ಬೆಳಿಗ್ಗೆ 8ಕ್ಕೆ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಗುತ್ತದೆ ಎಂದು ಬನ್ನಿ ಮಹಾಂಕಾಳಿ ಸೇವಾ ಟ್ರಸ್ಟಿನ ಅಧ್ಯಕ್ಷ ಕೆ.ಎಂ.ಗುರುರಾಜ ತಿಳಿಸಿದ್ದಾರೆ.