‘ನಾನು ಮತ್ತು ಕಿಚಡಿ ಪಂಪಾಪತಿ ತಾಲ್ಲೂಕಿನ ಹೊಸೂರು ಮಾಗಾಣಿಯಿಂದ ನಗರದ ತಾಲ್ಲೂಕು ಕಚೇರಿಯಲ್ಲಿ ಪಹಣಿ ಪಡೆಯಲು ಬೈಕಿನಲ್ಲಿ ಬರುತ್ತಿದ್ದೆವು. ರಸ್ತೆಯ ಉಬ್ಬಿನಲ್ಲಿ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದೆವು. ಈ ವೇಳೆ ಬೈಕ್ ಹಿಂಬದಿ ಕುಳಿತಿದ್ದ ಪಂಪಾಪತಿಯ ಬಲಗಾಲು ತಿರುಗುವ ಚಕ್ರದೊಳಗೆ ಸಿಲುಕಿ ಕಾಲಿನ ಎಲುಬು ಮುರಿದು, ರಕ್ತಸ್ರಾವವಾಗಿದೆ. ಸಕಾಲಕ್ಕೆ ಆಂಬುಲೆನ್ಸ್, ಆಟೊ ಸಿಗಲಿಲ್ಲ. ನೋವು ಗಮನಿಸಿದ ಬಾಣದ ಗಣೇಶ್ ಅವರು, ಅವರ ಸ್ಕೂಟಿಯಲ್ಲಿ ಪಂಪಾಪತಿ ಅವರನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು’ ಎಂದು ಅಂಚಿ ಭರಮಪ್ಪ ತಿಳಿಸಿದ್ದಾರೆ.