<p><strong>ಕೂಡ್ಲಿಗಿ:</strong> ‘ಹೆಚ್ಚಿನ ಕಲಾವಿದರಿಗೆ ಅವಕಾಶ ನೀಡಲು ಹಾಗೂ ಅವರ ಕಲೆಯನ್ನು ಪ್ರದರ್ಶಿಸಲು ಅಧಿಕ ಕಾಲಾವಕಾಶ ಒದಗಿಸಲು ಎರಡು ವೇದಿಕೆಗಳನ್ನು ನಿರ್ಮಾಣ ಮಾಡಬೇಕು’ ಎಂದು ಕಲಾವಿದೆ ಮಂಜಮ್ಮ ಜೋಗತಿ ಸಲಹೆ ನೀಡಿದರು.</p><p>ತಾಲ್ಲೂಕಿನ ಗುಡೇಕೋಟೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಒನಕೆ ಓಬವ್ವ ಉತ್ಸವದ ಸಮಾರೋಪ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಶ್ರೀನಿವಾಸ್ ಎನ್.ಟಿ. ಮಾತನಾಡಿ, ‘ಒಂದು ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮುಂದಿನ ದಿನಗಳಲ್ಲಿ ಪ್ರತಿಭಾವಂತ ಕಲಾವಿದರರಿಗೆ ಅವಕಾಶ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ’ ಎಂದು ಹೇಳಿದರು.</p><p>ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ. ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಕೃಷ್ಣ, ಸಹಾಯಕ ಆಯುಕ್ತ ವಿವೇಕಾನಂದ, ತಹಶೀಲ್ದಾರ್ ವಿ.ಕೆ. ನೇತ್ರಾವತಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ತಾಲ್ಲೂಕು ಪಂಚಾಯಿತಿ ಇಒ ಮರಸಪ್ಪ, ಕಾವಲಿ ಶಿವಪ್ಪ ನಾಯಕ, ಇತರರು ಇದ್ದರು.</p><p><strong>ಸಚಿವರು, ಸಂಸದರು ಗೈರು:</strong> ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಸಚಿವರು, ಸಂಸದರು ಬಾರದೆ ಇದ್ದದ್ದರಿಂದ ಜನರಲ್ಲಿ ಬೇಸರ ಮೂಡಿತು. ಶನಿವಾರ ನಡೆದ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಬೇಕಾಗಿದ್ದ ಸಚಿವರಾದ ಜಮೀರ್ ಅಹಮದ್ ಖಾನ್, ಎಚ್.ಕೆ. ಪಾಟೀಲ್, ಶಿವರಾಜ್ ತಂಗಡಗಿ, ಸಂಸದ ಈ ತುಕಾರಾಂ ಸೇರಿದಂತೆ ಜಿಲ್ಲೆ ಶಾಸಕರು ಗೈರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ‘ಹೆಚ್ಚಿನ ಕಲಾವಿದರಿಗೆ ಅವಕಾಶ ನೀಡಲು ಹಾಗೂ ಅವರ ಕಲೆಯನ್ನು ಪ್ರದರ್ಶಿಸಲು ಅಧಿಕ ಕಾಲಾವಕಾಶ ಒದಗಿಸಲು ಎರಡು ವೇದಿಕೆಗಳನ್ನು ನಿರ್ಮಾಣ ಮಾಡಬೇಕು’ ಎಂದು ಕಲಾವಿದೆ ಮಂಜಮ್ಮ ಜೋಗತಿ ಸಲಹೆ ನೀಡಿದರು.</p><p>ತಾಲ್ಲೂಕಿನ ಗುಡೇಕೋಟೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಒನಕೆ ಓಬವ್ವ ಉತ್ಸವದ ಸಮಾರೋಪ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p><p>ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಶ್ರೀನಿವಾಸ್ ಎನ್.ಟಿ. ಮಾತನಾಡಿ, ‘ಒಂದು ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಮುಂದಿನ ದಿನಗಳಲ್ಲಿ ಪ್ರತಿಭಾವಂತ ಕಲಾವಿದರರಿಗೆ ಅವಕಾಶ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ’ ಎಂದು ಹೇಳಿದರು.</p><p>ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ. ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಕೃಷ್ಣ, ಸಹಾಯಕ ಆಯುಕ್ತ ವಿವೇಕಾನಂದ, ತಹಶೀಲ್ದಾರ್ ವಿ.ಕೆ. ನೇತ್ರಾವತಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ತಾಲ್ಲೂಕು ಪಂಚಾಯಿತಿ ಇಒ ಮರಸಪ್ಪ, ಕಾವಲಿ ಶಿವಪ್ಪ ನಾಯಕ, ಇತರರು ಇದ್ದರು.</p><p><strong>ಸಚಿವರು, ಸಂಸದರು ಗೈರು:</strong> ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಸಚಿವರು, ಸಂಸದರು ಬಾರದೆ ಇದ್ದದ್ದರಿಂದ ಜನರಲ್ಲಿ ಬೇಸರ ಮೂಡಿತು. ಶನಿವಾರ ನಡೆದ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಬೇಕಾಗಿದ್ದ ಸಚಿವರಾದ ಜಮೀರ್ ಅಹಮದ್ ಖಾನ್, ಎಚ್.ಕೆ. ಪಾಟೀಲ್, ಶಿವರಾಜ್ ತಂಗಡಗಿ, ಸಂಸದ ಈ ತುಕಾರಾಂ ಸೇರಿದಂತೆ ಜಿಲ್ಲೆ ಶಾಸಕರು ಗೈರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>