<p><strong>ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಟ್ರ್ಯಾಕ್ಟರ್ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ತೀವ್ರ ಗಾಯಗೊಂಡ ಘಟನೆ ಸಮೀಪದ ತಿಮ್ಮಲಾಪುರ ಗ್ರಾಮದ ಟೋಲ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುಂದಿನ ರಾಷ್ಟ್ರೀಯ ಹೆದ್ದಾರಿ -50ರಲ್ಲಿ ಸೋಮವಾರ ನಡೆದಿದೆ.</p><p>ಲಾರಿ ಚಾಲಕ ಫಯಾಜ್ ಹಾಗೂ ಸಂಡೂರು ತಾಲ್ಲೂಕಿನ ಕಾಳಿಂಗೇರಿ ಗ್ರಾಮದ ಟ್ರ್ಯಾಕ್ಟರ್ ಚಾಲಕ ಹುಲ್ಲೇಶ್ ಮತ್ತು ಅದೇ ಗ್ರಾಮದ ಕೊತ್ಲಪ್ಪ, ಶಿವಪ್ಪ, ಬಾಲಕ ಯಶವಂತ ಅವರು ತೀವ್ರ ಗಾಯಗೊಂಡಿದ್ದು, ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಸಂಡೂರು ತಾಲ್ಲೂಕಿನ ಕಾಳಿಂಗೇರಿ ಗ್ರಾಮದಿಂದ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಭತ್ತದ ಮೂಟೆಗಳನ್ನು ತುಂಬಿಕೊಂಡು, ಈ ನಾಲ್ವರು ಮರಿಯಮ್ಮನಹಳ್ಳಿಯ ರೈಸ್ ಮಿಲ್ ಗೆ ಬರುತ್ತಿದ್ದಾಗ, ತಮಿಳುನಾಡಿನ ಕೃಷ್ಣಗಿರಿಯಿಂದ ಮುಂಬೈಗೆ ಸುಮಾರು 12 ಟನ್ ಮಾವಿನಕಾಯಿ ಸಾಗಿಸುತ್ತಿದ್ದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಡಿಕ್ಕಿ ಹೊಡೆದ ರಭಸಕ್ಕೆ ಹೆದ್ದಾರಿಯಲ್ಲಿ ಲಾರಿ ಪಲ್ಟಿ ಹೊಡೆದು ಮಾವಿನಕಾಯಿಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದರಿಂದ, ಗ್ರಾಮಸ್ಥರು ಮಾವಿನಕಾಯಿ ಆರಿಸಿಕೊಳ್ಳಲು ಮುಗಿಬಿದ್ದರೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಟ್ರ್ಯಾಕ್ಟರ್ನ ಎಂಜಿನ್ ಭಾಗ ಎರಡು ತುಂಡಾಗಿದೆ.</p><p>ಲಾರಿ ಬಿದ್ದಿದ್ದರಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ಚಿತ್ರದುರ್ಗ–ಹೊಸಪೇಟೆ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ನಿರ್ಮಾಣವಾಗಿತ್ತು. ಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಟ್ರ್ಯಾಕ್ಟರ್ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ತೀವ್ರ ಗಾಯಗೊಂಡ ಘಟನೆ ಸಮೀಪದ ತಿಮ್ಮಲಾಪುರ ಗ್ರಾಮದ ಟೋಲ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುಂದಿನ ರಾಷ್ಟ್ರೀಯ ಹೆದ್ದಾರಿ -50ರಲ್ಲಿ ಸೋಮವಾರ ನಡೆದಿದೆ.</p><p>ಲಾರಿ ಚಾಲಕ ಫಯಾಜ್ ಹಾಗೂ ಸಂಡೂರು ತಾಲ್ಲೂಕಿನ ಕಾಳಿಂಗೇರಿ ಗ್ರಾಮದ ಟ್ರ್ಯಾಕ್ಟರ್ ಚಾಲಕ ಹುಲ್ಲೇಶ್ ಮತ್ತು ಅದೇ ಗ್ರಾಮದ ಕೊತ್ಲಪ್ಪ, ಶಿವಪ್ಪ, ಬಾಲಕ ಯಶವಂತ ಅವರು ತೀವ್ರ ಗಾಯಗೊಂಡಿದ್ದು, ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಸಂಡೂರು ತಾಲ್ಲೂಕಿನ ಕಾಳಿಂಗೇರಿ ಗ್ರಾಮದಿಂದ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಭತ್ತದ ಮೂಟೆಗಳನ್ನು ತುಂಬಿಕೊಂಡು, ಈ ನಾಲ್ವರು ಮರಿಯಮ್ಮನಹಳ್ಳಿಯ ರೈಸ್ ಮಿಲ್ ಗೆ ಬರುತ್ತಿದ್ದಾಗ, ತಮಿಳುನಾಡಿನ ಕೃಷ್ಣಗಿರಿಯಿಂದ ಮುಂಬೈಗೆ ಸುಮಾರು 12 ಟನ್ ಮಾವಿನಕಾಯಿ ಸಾಗಿಸುತ್ತಿದ್ದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಡಿಕ್ಕಿ ಹೊಡೆದ ರಭಸಕ್ಕೆ ಹೆದ್ದಾರಿಯಲ್ಲಿ ಲಾರಿ ಪಲ್ಟಿ ಹೊಡೆದು ಮಾವಿನಕಾಯಿಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದರಿಂದ, ಗ್ರಾಮಸ್ಥರು ಮಾವಿನಕಾಯಿ ಆರಿಸಿಕೊಳ್ಳಲು ಮುಗಿಬಿದ್ದರೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಟ್ರ್ಯಾಕ್ಟರ್ನ ಎಂಜಿನ್ ಭಾಗ ಎರಡು ತುಂಡಾಗಿದೆ.</p><p>ಲಾರಿ ಬಿದ್ದಿದ್ದರಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ಚಿತ್ರದುರ್ಗ–ಹೊಸಪೇಟೆ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ನಿರ್ಮಾಣವಾಗಿತ್ತು. ಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>