<p>ಹೊಸಪೇಟೆ (ವಿಜಯನಗರ): ‘ಕುರುಬರು ಸೇರಿ ವಿವಿಧ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹುನ್ನಾರ ನಡೆದಿದೆ’ ಎಂದು ಆರೋಪಿಸಿ ವಾಲ್ಮೀಕಿ ಸಮಾಜದವರು ಶುಕ್ರವಾರ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಿದರು.</p>.<p>ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಕರೆದಿದ್ದ ಸಭೆ ಆರಂಭವಾಗುತ್ತಿದ್ದಂತೆಯೇ, ‘ಸರ್ಕಾರದ ನಿಲುವಿಗೆ ವಿರೋಧ ತಿಳಿಸಿ. ಸಭೆಯನ್ನು ಬಹಿಷ್ಕರಿಸುತ್ತೇವೆ’ ಎಂದರು.</p>.<p>‘ರಾಜನಹಳ್ಳಿ ಗುರುಪೀಠದಲ್ಲಿ ಗುರುವಾರ ನಡೆದ ಸಭೆಯಲ್ಲೂ ಗದ್ದಲ ಆಗಿತ್ತು. ನಮಗೆ ಅನ್ಯಾಯ ಮಾಡಲು, ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕೆ ವಿರೋಧ ಇದೆ. ನ್ಯಾಯ ಸಿಗುವವರೆಗೂ, ಹೋರಾಡುತ್ತೇವೆ’ ಎಂದು ಹೇಳಿ ಮುಖಂಡರು ಸಭೆಯಿಂದ ಹೊರನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ‘ಕುರುಬರು ಸೇರಿ ವಿವಿಧ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹುನ್ನಾರ ನಡೆದಿದೆ’ ಎಂದು ಆರೋಪಿಸಿ ವಾಲ್ಮೀಕಿ ಸಮಾಜದವರು ಶುಕ್ರವಾರ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಿದರು.</p>.<p>ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಕರೆದಿದ್ದ ಸಭೆ ಆರಂಭವಾಗುತ್ತಿದ್ದಂತೆಯೇ, ‘ಸರ್ಕಾರದ ನಿಲುವಿಗೆ ವಿರೋಧ ತಿಳಿಸಿ. ಸಭೆಯನ್ನು ಬಹಿಷ್ಕರಿಸುತ್ತೇವೆ’ ಎಂದರು.</p>.<p>‘ರಾಜನಹಳ್ಳಿ ಗುರುಪೀಠದಲ್ಲಿ ಗುರುವಾರ ನಡೆದ ಸಭೆಯಲ್ಲೂ ಗದ್ದಲ ಆಗಿತ್ತು. ನಮಗೆ ಅನ್ಯಾಯ ಮಾಡಲು, ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕೆ ವಿರೋಧ ಇದೆ. ನ್ಯಾಯ ಸಿಗುವವರೆಗೂ, ಹೋರಾಡುತ್ತೇವೆ’ ಎಂದು ಹೇಳಿ ಮುಖಂಡರು ಸಭೆಯಿಂದ ಹೊರನಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>