‘ಖಾತೆ ಹಂಚಿಕೆಯ ಗೊಂದಲದ ಬಗ್ಗೆ ನಾನು ಯಾವುದೇ ರೀತಿಯ ವ್ಯಾಖ್ಯಾನ ಮಾಡುವುದಿಲ್ಲ. ಅದನ್ನು ಸಿ.ಎಂ. ಸಮರ್ಥವಾಗಿ ನಿಭಾಯಿಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.
ಖಾತೆ ಬದಲಿಸಬೇಕೆಂದು ಪಟ್ಟು ಹಿಡಿದಿರುವ ಸಚಿವ ಆನಂದ್ ಸಿಂಗ್ ಅವರು ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಗೈರಾಗಿರುವುದರ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಅದರ ಬಗ್ಗೆ ನಾನೇನೂ ಮಾತನಾಡಲಾರೆ. ಸಿ.ಎಂ ಬಗೆಹರಿಸುತ್ತಾರೆ ಎಂದರು.
ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಶಾಸಕ ಬಸವರಾಜ ಧಡೇಸುಗೂರು ಇದ್ದರು.