<p><strong>ಹೊಸಪೇಟೆ (ವಿಜಯನಗರ):</strong> ‘ವಿಕಲಚೇತನರಿಗೆ ವಿಕಲಾಂಗತೆ ದೌರ್ಬಲ್ಯವಲ್ಲ. ದೈಹಿಕ ನ್ಯೂನತೆಯ ಜತೆಗೆ ಒಂದು ವಿಶೇಷ ಸಾಮಾರ್ಥ್ಯ ಶಕ್ತಿಯನ್ನು ಹೊಂದಿರುತ್ತಾರೆ, ಎಲ್ಲ ಅಂಗಗಳೂ ಸಮರ್ಪಕವಾಗಿರುವವರ ಮಾನಸಿಕ ಅಂಗವೈಕಲ್ಯವೇ ಇಂದಿನ ದೊಡ್ಡ ಸವಾಲು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.</p>.<p>ಇಲ್ಲಿನ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ವಿಶ್ವ ಅಂಗವಿಕಲ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿಕಲಾಂಗರು ದೈಹಿಕವಾಗಿ ನ್ಯೂನತೆಗಳನ್ನು ಹೊಂದಿರಬಹುದು, ಆದರೆ ನಾಗರಿಕ ಸಮಾಜದಲ್ಲಿ ಸಾಮಾನ್ಯ ವ್ಯಕ್ತಿಗಳು ಕೊಳಕು ಮನಸ್ಥಿತಿಯಿಂದ ಮಾನಸಿಕ ವಿಕಲಾಂಗತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಅಂತಹ ಹೀನ ವ್ಯಕ್ತಿಗಳೇ ನಿಜವಾದ ವಿಕಲಚೇತನರು ಅನ್ನಿಸಿಕೊಳ್ಳುತ್ತಾರೆ, ನಾವೆಲ್ಲರೂ ಮಾನಸಿಕ ಅಂಗವೈಕಲ್ಯ ಬರದಂತೆ ನೋಡಿಕೊಳ್ಳಬೇಕಿದೆ’ ಎಂದು ಡಿಸಿ ಸಲಹೆ ನೀಡಿದರು.</p>.<p>ಇದೇ ವೇಳೆ ವಿಶ್ವ ವಿಕಲಚೇತನರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ‘ವಿಕಲಚೇತನರಿಗೆ ವಿಕಲಾಂಗತೆ ದೌರ್ಬಲ್ಯವಲ್ಲ. ದೈಹಿಕ ನ್ಯೂನತೆಯ ಜತೆಗೆ ಒಂದು ವಿಶೇಷ ಸಾಮಾರ್ಥ್ಯ ಶಕ್ತಿಯನ್ನು ಹೊಂದಿರುತ್ತಾರೆ, ಎಲ್ಲ ಅಂಗಗಳೂ ಸಮರ್ಪಕವಾಗಿರುವವರ ಮಾನಸಿಕ ಅಂಗವೈಕಲ್ಯವೇ ಇಂದಿನ ದೊಡ್ಡ ಸವಾಲು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.</p>.<p>ಇಲ್ಲಿನ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ವಿಶ್ವ ಅಂಗವಿಕಲ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿಕಲಾಂಗರು ದೈಹಿಕವಾಗಿ ನ್ಯೂನತೆಗಳನ್ನು ಹೊಂದಿರಬಹುದು, ಆದರೆ ನಾಗರಿಕ ಸಮಾಜದಲ್ಲಿ ಸಾಮಾನ್ಯ ವ್ಯಕ್ತಿಗಳು ಕೊಳಕು ಮನಸ್ಥಿತಿಯಿಂದ ಮಾನಸಿಕ ವಿಕಲಾಂಗತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಅಂತಹ ಹೀನ ವ್ಯಕ್ತಿಗಳೇ ನಿಜವಾದ ವಿಕಲಚೇತನರು ಅನ್ನಿಸಿಕೊಳ್ಳುತ್ತಾರೆ, ನಾವೆಲ್ಲರೂ ಮಾನಸಿಕ ಅಂಗವೈಕಲ್ಯ ಬರದಂತೆ ನೋಡಿಕೊಳ್ಳಬೇಕಿದೆ’ ಎಂದು ಡಿಸಿ ಸಲಹೆ ನೀಡಿದರು.</p>.<p>ಇದೇ ವೇಳೆ ವಿಶ್ವ ವಿಕಲಚೇತನರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>