<p><strong>ಹೊಸಪೇಟೆ (ವಿಜಯನಗರ):</strong> ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷದಲ್ಲಿ 200 ದಿನ ಕೆಲಸ ಕೊಡಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯವರು ಮಂಗಳವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.<br /><br />ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಪ್ರಮುಖ ಮಾರ್ಗಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್ಯಾಲಿ ನಡೆಸಿದರು. ಅನಂತರ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.<br /><br />ಕೂಲಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ವರ್ಷದಲ್ಲಿ ಕನಿಷ್ಠ 200 ದಿನ ಕೆಲಸ ನೀಡಿದರೆ ಅವರಿಗೆ ಸ್ವಲ್ಪಮಟ್ಟಿನ ಸಹಾಯವಾಗುತ್ತದೆ. ಅರ್ಜಿ ಸಲ್ಲಿಸಿದ ತಕ್ಷಣವೇ ಕೆಲಸ ಕೊಡಲು ವ್ಯವಸ್ಥೆ ಮಾಡಬೇಕು. ಕೆಲಸ ನಿರ್ವಹಣೆಗೆ ಸಾಮಗ್ರಿಗಳ ಬಳಕೆ, ದುರಸ್ತಿಗೆ ₹10ರ ಬದಲು ₹20 ನೀಡಬೇಕು. ಗ್ರಾಮೀಣರಿಗೆ ಐದು ಕಿ.ಮೀಗಿಂತ ದೂರದ ಪ್ರದೇಶದಲ್ಲಿ ಕೆಲಸ ಕೊಟ್ಟರೆ ಅದರ ಪ್ರಯಾಣದ ವೆಚ್ಚ ಭರಿಸಬೇಕು. ಕೆಲಸ ಮಾಡಿದ 15 ದಿನದೊಳಗೆ ಕೂಲಿ ಪಾವತಿಸಬೇಕು ಎಂದು ಒತ್ತಾಯಿಸಿದರು.<br /><br />ಸಂಘಟನೆಯ ರತ್ನಮ್ಮ, ಶಬ್ಬೀರ್ ಬಾಷ, ಪಿ. ಅನಿಲ್ಕುಮಾರ್, ಎಂ. ಶಿಲ್ಪಾ, ಎನ್. ಯಶೋಧ, ಪಾರಿಜಾತ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷದಲ್ಲಿ 200 ದಿನ ಕೆಲಸ ಕೊಡಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯವರು ಮಂಗಳವಾರ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.<br /><br />ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಪ್ರಮುಖ ಮಾರ್ಗಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್ಯಾಲಿ ನಡೆಸಿದರು. ಅನಂತರ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.<br /><br />ಕೂಲಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ವರ್ಷದಲ್ಲಿ ಕನಿಷ್ಠ 200 ದಿನ ಕೆಲಸ ನೀಡಿದರೆ ಅವರಿಗೆ ಸ್ವಲ್ಪಮಟ್ಟಿನ ಸಹಾಯವಾಗುತ್ತದೆ. ಅರ್ಜಿ ಸಲ್ಲಿಸಿದ ತಕ್ಷಣವೇ ಕೆಲಸ ಕೊಡಲು ವ್ಯವಸ್ಥೆ ಮಾಡಬೇಕು. ಕೆಲಸ ನಿರ್ವಹಣೆಗೆ ಸಾಮಗ್ರಿಗಳ ಬಳಕೆ, ದುರಸ್ತಿಗೆ ₹10ರ ಬದಲು ₹20 ನೀಡಬೇಕು. ಗ್ರಾಮೀಣರಿಗೆ ಐದು ಕಿ.ಮೀಗಿಂತ ದೂರದ ಪ್ರದೇಶದಲ್ಲಿ ಕೆಲಸ ಕೊಟ್ಟರೆ ಅದರ ಪ್ರಯಾಣದ ವೆಚ್ಚ ಭರಿಸಬೇಕು. ಕೆಲಸ ಮಾಡಿದ 15 ದಿನದೊಳಗೆ ಕೂಲಿ ಪಾವತಿಸಬೇಕು ಎಂದು ಒತ್ತಾಯಿಸಿದರು.<br /><br />ಸಂಘಟನೆಯ ರತ್ನಮ್ಮ, ಶಬ್ಬೀರ್ ಬಾಷ, ಪಿ. ಅನಿಲ್ಕುಮಾರ್, ಎಂ. ಶಿಲ್ಪಾ, ಎನ್. ಯಶೋಧ, ಪಾರಿಜಾತ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>