ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಉದ್ಯೋಗ ಖಾತ್ರಿ ಹಾಜರಿ ಸಮಯ ಬದಲು

‘ಪ್ರಜಾವಾಣಿ’ ವರದಿ ಪರಿಣಾಮ
Last Updated 9 ಮೇ 2022, 8:35 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಪ್ರಜಾವಾಣಿ’ ವರದಿಗೆ ಎಚ್ಚೆತ್ತುಕೊಂಡಿರುವ ಜಿಲ್ಲಾ ಪಂಚಾಯಿತಿ, ಕೂಲಿ ಕಾರ್ಮಿಕರ ಹಾಜರಿ ಸಮಯ ಬದಲಿಸಿದೆ.

‘ಬೇಸಿಗೆಯಲ್ಲಿ ಉದ್ಯೋಗ ಖಾತ್ರಿಗೆ ನಿರಾಸಕ್ತಿ’ ಶೀರ್ಷಿಕೆ ಅಡಿ ಮೇ 2ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು. ಕೂಲಿ ಕಾರ್ಮಿಕರಿಗೆ ಸಮಯ ನಿಗದಿ ಮಾಡಿ ಎರಡು ಸಲ ಇ–ಹಾಜರಾತಿ ಪಡೆದುಕೊಳ್ಳಲಾಗುತ್ತಿತ್ತು. ರಣ ಬಿಸಿಲಲ್ಲಿ ನೆರಳು, ಕುಡಿಯುವ ನೀರು ಸೇರಿದಂತೆ ಇತರೆ ಸೌಕರ್ಯಗಳನ್ನು ಕಲ್ಪಿಸಿರಲಿಲ್ಲ. ಇದರ ಮೇಲೆ ‘ಪ್ರಜಾವಾಣಿ’ ಬೆಳಕು ಚೆಲ್ಲಿತ್ತು.

ಪತ್ರಿಕೆಯ ವರದಿಗೆ ಸ್ಪಂದಿಸಿರುವ ಜಿಲ್ಲಾ ಪಂಚಾಯಿತಿ ಬೇಸಿಗೆಯಲ್ಲಿ ಬೆಳಿಗ್ಗೆ 8ರಿಂದ ಕೆಲಸ ಆರಂಭಿಸಲು ಅವಕಾಶ ಕಲ್ಪಿಸಿದೆ. ಈಗ ಬೆಳಿಗ್ಗೆ 8ಗಂಟೆಗೆ ಒಂದೇ ಸಲ ಹಾಜರಾತಿ ಪಡೆಯಲಾಗುತ್ತಿದೆ. ಕೆಲಸ ಮಾಡುವ ಸ್ಥಳದಲ್ಲಿ ಕುಡಿಯುವ ನೀರು, ನೆರಳಿಗೆ ವ್ಯವಸ್ಥೆ ಮಾಡಲಾಗಿದೆ. ಈ ಹಿಂದೆ ಎನ್‌ಎಂಎಂಎಸ್‌ ಆ್ಯಪ್‌ನಲ್ಲಿ ಬೆಳಿಗ್ಗೆ ಹಾಗೂ ಸಂಜೆ ಹಾಜರಾತಿ ಪಡೆದು ಅಪ್‌ಲೋಡ್‌ ಮಾಡಲಾಗುತ್ತಿತ್ತು. ಇದಕ್ಕೆ ಕಾರ್ಮಿಕರು ಬೇಸತ್ತು ಹೋಗಿದ್ದರು. ಅನೇಕರು ಕೆಲಸದ ಬಗ್ಗೆ ನಿರಾಸಕ್ತಿ ತೋರಿ ದೂರ ಉಳಿದಿದ್ದರು. ಗಣನೀಯವಾಗಿ ಕಾರ್ಮಿಕರ ಸಂಖ್ಯೆ ಕುಸಿದಿತ್ತು.

ಮೇ 2ರಂದು ‘ಪ್ರಜಾವಾಣಿ’ಯಲ್ಲಿಪ್ರಕಟಗೊಂಡಿದ್ದ ವರದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT