ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಗರಿಬೊಮ್ಮನಹಳ್ಳಿ: ಹೂಳೆತ್ತುವಾಗ ಹೃದಯಾಘಾತದಿಂದ ನರೇಗಾ ಕೂಲಿ ಕಾರ್ಮಿಕ ಸಾವು

ಕೂಲಿ ಕಾರ್ಮಿಕರೊಬ್ಬರು ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Published 14 ಮೇ 2024, 5:06 IST
Last Updated 14 ಮೇ 2024, 5:06 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ಜಲಾಶಯದಲ್ಲಿ ನರೇಗಾ ಯೋಜನೆಯಲ್ಲಿ ಹೂಳೆತ್ತುವ ಕಾಮಗಾರಿ ನಿರ್ವಹಿಸುವಾಗ ಕೂಲಿ ಕಾರ್ಮಿಕರೊಬ್ಬರು ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮಸಾರಿ ನೆಲ್ಕುದ್ರಿ ಗ್ರಾಮದ ಕಡ್ಲಿ ರಾಘವೇಂದ್ರ(45) ಮೃತ ಕೂಲಿ ಕಾರ್ಮಿಕ.

ತೀವ್ರ ಎದೆನೋವು ಅವರು ಸ್ಥಳದಲ್ಲಿ ಕುಸಿದುಬಿದ್ದರು. ಅವರನ್ನು ತಾಲ್ಲೂಕು ಆಸ್ಪತ್ರೆಗೆ ಕರೆದು ತರಲಾಯಿತು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆಂದು ನರೇಗಾ ಸಹಾಯಕ ನಿರ್ದೇಶಕ ರಮೇಶ್ ಮಹಾಲಿಂಗಪುರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT