<p><strong>ಹರಪನಹಳ್ಳಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ನಂದಿಬೇವೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲೇ ಮಂಗಳವಾರದಿಂದ ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ.</p> <p> ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ, ಜಿಲ್ಲಾ ಬಿಸಿಯೂಟ ಯೋಜನಾಧಿಕಾರಿ ಹೊರಪೇಟೆ ಶೇಖರಪ್ಪ ಅವರು ಶಾಲೆಗೆ ಭೇಟಿ ನೀಡಿ, ಪರಿಶೀಲಿಸಿದರು. 11 ವರ್ಷದಿಂದ ಆಗದೆ ಇದ್ದ ವ್ಯವಸ್ಥೆಗೆ ಚಾಲನೆ ನೀಡಿದರು.</p>.<p>‘ಹಳೆಯ ಕಟ್ಟಡದಲ್ಲಿ ಬಿಸಿಯೂಟ ತಯಾರಿಸಿಕೊಂಡು ತಳ್ಳುವ ಬಂಡಿ ಮೂಲಕ ಪಾತ್ರೆಗಳನ್ನು ಸಾಗಿಸಿ 4ರಿಂದ 7ನೇ ತರಗತಿಯ 185 ವಿದ್ಯಾರ್ಥಿಗಳಿಗೆ ಹೊಸ ಕಟ್ಟಡದಲ್ಲೇ ಬಿಸಿಯೂಟ ಬಡಿಸಲಾಯಿತು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಬಿಸಿಯೂಟಕ್ಕಾಗಿ ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿ ಮೂಲಕ ಒಂದು ಕಿ.ಮೀ.ನಡೆದು ಹೋಗಬೇಕಾದ ಸ್ಥಿತಿ ಕುರಿತು ಜನವರಿ 28ರ ‘ಪ್ರಜಾವಾಣಿ’ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.</p>.ಬಿಸಿಯೂಟಕ್ಕಾಗಿ ನಿತ್ಯ 2 ಕಿ.ಮೀ ಓಡಾಟ ನಡೆಸುತ್ತಿರುವ ಲಾಡ್ಲಾಪುರದ 150 ಮಕ್ಕಳು! .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ನಂದಿಬೇವೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲೇ ಮಂಗಳವಾರದಿಂದ ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ.</p> <p> ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ, ಜಿಲ್ಲಾ ಬಿಸಿಯೂಟ ಯೋಜನಾಧಿಕಾರಿ ಹೊರಪೇಟೆ ಶೇಖರಪ್ಪ ಅವರು ಶಾಲೆಗೆ ಭೇಟಿ ನೀಡಿ, ಪರಿಶೀಲಿಸಿದರು. 11 ವರ್ಷದಿಂದ ಆಗದೆ ಇದ್ದ ವ್ಯವಸ್ಥೆಗೆ ಚಾಲನೆ ನೀಡಿದರು.</p>.<p>‘ಹಳೆಯ ಕಟ್ಟಡದಲ್ಲಿ ಬಿಸಿಯೂಟ ತಯಾರಿಸಿಕೊಂಡು ತಳ್ಳುವ ಬಂಡಿ ಮೂಲಕ ಪಾತ್ರೆಗಳನ್ನು ಸಾಗಿಸಿ 4ರಿಂದ 7ನೇ ತರಗತಿಯ 185 ವಿದ್ಯಾರ್ಥಿಗಳಿಗೆ ಹೊಸ ಕಟ್ಟಡದಲ್ಲೇ ಬಿಸಿಯೂಟ ಬಡಿಸಲಾಯಿತು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಬಿಸಿಯೂಟಕ್ಕಾಗಿ ವಿದ್ಯಾರ್ಥಿಗಳು ರಾಜ್ಯ ಹೆದ್ದಾರಿ ಮೂಲಕ ಒಂದು ಕಿ.ಮೀ.ನಡೆದು ಹೋಗಬೇಕಾದ ಸ್ಥಿತಿ ಕುರಿತು ಜನವರಿ 28ರ ‘ಪ್ರಜಾವಾಣಿ’ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.</p>.ಬಿಸಿಯೂಟಕ್ಕಾಗಿ ನಿತ್ಯ 2 ಕಿ.ಮೀ ಓಡಾಟ ನಡೆಸುತ್ತಿರುವ ಲಾಡ್ಲಾಪುರದ 150 ಮಕ್ಕಳು! .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>