<p><strong>ಹೊಸಪೇಟೆ (ವಿಜಯನಗರ):</strong> ನೂತನ ವಿಜಯನಗರ ಜಿಲ್ಲೆಯ ಉದ್ಘಾಟನಾ ಸಮಾರಂಭ ಅ.2 ಗಾಂಧಿ ಜಯಂತಿ ದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರದಲ್ಲಿ ಉದ್ಘಾಟಿಸುವರು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ತಿಳಿಸಿದರು.<br /><br />ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ನಿಮಿತ್ತ ಶುಕ್ರವಾರ ನಗರದ ಕ್ರೀಡಾಂಗಣದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.<br /><br />ಅ. 2, 3ರಂದು ಎರಡು ದಿನ ಕಾರ್ಯಕ್ರಮ ಆಚರಿಸಲಾಗುವುದು. ವಿಜಯನಗರ ರಚನೆಗೆ ಕಾರಣರಾದ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ಹಾಲಿ, ಮಾಜಿ ಶಾಸಕ, ಸಚಿವರನ್ನು ಆಹ್ವಾನಿಸಲಾಗುತ್ತದೆ. ಸರಳ-ವಿಜೃಂಭಣೆಯ ನಡುವೆ ಕಾರ್ಯಕ್ರಮ ಜರುಗಲಿದೆ. ಹೆಚ್ಚು ಎಲ್ಇಡಿ ಪರದೆ ಅಳವಡಿಸಿ ಜನ ಸೇರದಂತೆ ನೋಡಲಾಗುವುದು ಎಂದರು.<br /><br />ಅ. 2ರ ನಂತರ ಜಿಲ್ಲೆ ಕಟ್ಟುವ ಪ್ರಕ್ರಿಯೆ ಚುರುಕುಗೊಳ್ಳಲಿದೆ. ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಪ್ರಮುಖ ಕಚೇರಿಗಳನ್ನು ಆರಂಭಿಸಲಾಗುವುದು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ವೇಗ ಕೊಡಲಾಗುವುದು ಎಂದು ವಿವರಿಸಿದರು.<br /><br />ಹೊಸ ಜಿಲ್ಲೆ ಕಟ್ಟುವುದು ಸವಾಲಿನ ಕೆಲಸ. ಆದರೆ, ಇತರೆ ಜಿಲ್ಲೆಗಳ ಅಭಿವೃದ್ಧಿ, ಕಟ್ಟಿದ ಅನುಭವ ನೋಡಿಕೊಂಡು ವಿಜಯನಗರ ಕಟ್ಟಲಾಗುವುದು. ಆದರೆ, ಕೆಲವು ಜಿಲ್ಲೆಗಳ ಅಭಿವೃದ್ಧಿ ಗೆ ಸಾಕಷ್ಟು ವಿಳಂಬವಾಗಿದೆ. ಆ ರೀತಿ ವಿಜಯನಗರ ಆಗುವುದಿಲ್ಲ. ಬೇಗ ಎಲ್ಲಾ ಕಾಮಗಾರಿಗಳನ್ನು ಆರಂಭಿಸಲಾಗುವುದು. ಅನುದಾನ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/ramnath-kovind-amit-shah-and-other-top-leaders-wishs-to-pm-narendra-modi-birthday-867383.html" target="_blank">71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ</a></strong><br /><br />ವಿಜಯನಗರ ಜಿಲ್ಲೆ ರಚನೆಯಾದ ನಂತರ 371 ಜೆ ಸೌಲಭ್ಯ ಹೋಗುತ್ತವೆ ಎಂಬ ಸುದ್ದಿಗಳು ಹರಿದಾಡಿತ್ತು. ಈ ದಿನ ಕಲ್ಯಾಣ ಕರ್ನಾಟಕ ದಿನ ಆಚರಿಸಲಾಗಿದೆ. ಎಲ್ಲರಿಗೂ ಈ ಹಿಂದಿನಂತೆಯೇ ಎಲ್ಲಾ ಸವಲತ್ತುಗಳು ಸಿಗಲಿವೆ. ಕೋವಿಡ್ ಇರುವುದರಿಂದ ಹೆಚ್ಚಿಗೆ ಜನ ಸೇರಿಸದೆ ವಿಮೋಚನಾ ದಿನ ಸರಳವಾಗಿ ಆಚರಿಸಲಾಗಿದೆ ಎಂದು ಹೇಳಿದರು.<br /><br />ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಅನಿರುದ್ಧ್ ಪಿ. ಶ್ರವಣ್, ಹೆಚ್ಚುವರಿ ಎಸ್ಪಿ ಬಿ.ಎನ್. ಲಾವಣ್ಯ, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ವಿಶ್ವನಾಥ್, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ ಇದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/district/kalaburagi/kalyana-karnataka-utsav-sardar-vallabhbhai-patel-basavaraj-bommai-bs-yediyurappa-867394.html" target="_blank">ಕಲ್ಯಾಣ ಕರ್ನಾಟಕ ಉತ್ಸವ: ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ ಎಂದ ಬೊಮ್ಮಾಯಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ನೂತನ ವಿಜಯನಗರ ಜಿಲ್ಲೆಯ ಉದ್ಘಾಟನಾ ಸಮಾರಂಭ ಅ.2 ಗಾಂಧಿ ಜಯಂತಿ ದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರದಲ್ಲಿ ಉದ್ಘಾಟಿಸುವರು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ತಿಳಿಸಿದರು.<br /><br />ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ನಿಮಿತ್ತ ಶುಕ್ರವಾರ ನಗರದ ಕ್ರೀಡಾಂಗಣದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.<br /><br />ಅ. 2, 3ರಂದು ಎರಡು ದಿನ ಕಾರ್ಯಕ್ರಮ ಆಚರಿಸಲಾಗುವುದು. ವಿಜಯನಗರ ರಚನೆಗೆ ಕಾರಣರಾದ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ಹಾಲಿ, ಮಾಜಿ ಶಾಸಕ, ಸಚಿವರನ್ನು ಆಹ್ವಾನಿಸಲಾಗುತ್ತದೆ. ಸರಳ-ವಿಜೃಂಭಣೆಯ ನಡುವೆ ಕಾರ್ಯಕ್ರಮ ಜರುಗಲಿದೆ. ಹೆಚ್ಚು ಎಲ್ಇಡಿ ಪರದೆ ಅಳವಡಿಸಿ ಜನ ಸೇರದಂತೆ ನೋಡಲಾಗುವುದು ಎಂದರು.<br /><br />ಅ. 2ರ ನಂತರ ಜಿಲ್ಲೆ ಕಟ್ಟುವ ಪ್ರಕ್ರಿಯೆ ಚುರುಕುಗೊಳ್ಳಲಿದೆ. ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಪ್ರಮುಖ ಕಚೇರಿಗಳನ್ನು ಆರಂಭಿಸಲಾಗುವುದು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ವೇಗ ಕೊಡಲಾಗುವುದು ಎಂದು ವಿವರಿಸಿದರು.<br /><br />ಹೊಸ ಜಿಲ್ಲೆ ಕಟ್ಟುವುದು ಸವಾಲಿನ ಕೆಲಸ. ಆದರೆ, ಇತರೆ ಜಿಲ್ಲೆಗಳ ಅಭಿವೃದ್ಧಿ, ಕಟ್ಟಿದ ಅನುಭವ ನೋಡಿಕೊಂಡು ವಿಜಯನಗರ ಕಟ್ಟಲಾಗುವುದು. ಆದರೆ, ಕೆಲವು ಜಿಲ್ಲೆಗಳ ಅಭಿವೃದ್ಧಿ ಗೆ ಸಾಕಷ್ಟು ವಿಳಂಬವಾಗಿದೆ. ಆ ರೀತಿ ವಿಜಯನಗರ ಆಗುವುದಿಲ್ಲ. ಬೇಗ ಎಲ್ಲಾ ಕಾಮಗಾರಿಗಳನ್ನು ಆರಂಭಿಸಲಾಗುವುದು. ಅನುದಾನ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/ramnath-kovind-amit-shah-and-other-top-leaders-wishs-to-pm-narendra-modi-birthday-867383.html" target="_blank">71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ</a></strong><br /><br />ವಿಜಯನಗರ ಜಿಲ್ಲೆ ರಚನೆಯಾದ ನಂತರ 371 ಜೆ ಸೌಲಭ್ಯ ಹೋಗುತ್ತವೆ ಎಂಬ ಸುದ್ದಿಗಳು ಹರಿದಾಡಿತ್ತು. ಈ ದಿನ ಕಲ್ಯಾಣ ಕರ್ನಾಟಕ ದಿನ ಆಚರಿಸಲಾಗಿದೆ. ಎಲ್ಲರಿಗೂ ಈ ಹಿಂದಿನಂತೆಯೇ ಎಲ್ಲಾ ಸವಲತ್ತುಗಳು ಸಿಗಲಿವೆ. ಕೋವಿಡ್ ಇರುವುದರಿಂದ ಹೆಚ್ಚಿಗೆ ಜನ ಸೇರಿಸದೆ ವಿಮೋಚನಾ ದಿನ ಸರಳವಾಗಿ ಆಚರಿಸಲಾಗಿದೆ ಎಂದು ಹೇಳಿದರು.<br /><br />ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಅನಿರುದ್ಧ್ ಪಿ. ಶ್ರವಣ್, ಹೆಚ್ಚುವರಿ ಎಸ್ಪಿ ಬಿ.ಎನ್. ಲಾವಣ್ಯ, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ವಿಶ್ವನಾಥ್, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ ಇದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/district/kalaburagi/kalyana-karnataka-utsav-sardar-vallabhbhai-patel-basavaraj-bommai-bs-yediyurappa-867394.html" target="_blank">ಕಲ್ಯಾಣ ಕರ್ನಾಟಕ ಉತ್ಸವ: ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ ಎಂದ ಬೊಮ್ಮಾಯಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>