<p><strong>ಹೊಸಪೇಟೆ (ವಿಜಯನಗರ): </strong>ಶಾಸಕ ರಮೇಶ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಸೋದರ ಅಳಿಯ, ಬಿಜೆಪಿ ಯುವ ಮುಖಂಡ ಸಂದೀಪ್ ಸಿಂಗ್, ಶನಿವಾರ ವಾಲ್ಮೀಕಿ ನಾಯಕ ಸಮಾಜದ ಕ್ಷಮೆಯಾಚಿಸಿದ್ದಾರೆ.</p>.<p>ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ ಅವರ ಮಧ್ಯಸ್ಥಿಕೆಯಲ್ಲಿ ನಗರದಲ್ಲಿ ನಡೆದ ಸಭೆಯಲ್ಲಿ ಏಳು ಕೇರಿಯ ವಾಲ್ಮೀಕಿ ನಾಯಕ ಸಮಾಜದ 50ಕ್ಕೂ ಹೆಚ್ಚು ಮುಖಂಡರು ಹಾಗೂ ಸಂದೀಪ್ ಸಿಂಗ್ ಪಾಲ್ಗೊಂಡಿದ್ದರು.</p>.<p>‘ವಾಲ್ಮೀಕಿ ಸಮಾಜದಿಂದಲೇ ನಿಮ್ಮ ಮಾವ ಆನಂದ್ ಸಿಂಗ್ ಇಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ನಾಲ್ಕು ಸಲ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಸಮಾಜ ನಿಮಗೇನು ಅನ್ಯಾಯ ಮಾಡಿದೆ’ ಎಂದು ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಉಪಾಧ್ಯಕ್ಷ ನಾಣಿಕೇರಿ ತಿಮ್ಮಯ್ಯ ಸೇರಿದಂತೆ ಸಮಾಜದ ಮುಖಂಡರು ಪ್ರಶ್ನಿಸಿದ್ದಾರೆ.</p>.<p>ಅದಕ್ಕೆ ಸಂದೀಪ್ ಸಿಂಗ್, ‘ನನ್ನಿಂದ ತಪ್ಪಾಗಿದೆ. ಭವಿಷ್ಯದಲ್ಲಿ ಈ ರೀತಿ ಮಾಡಲಾರೆ. ನನ್ನನ್ನು ಸಮಾಜದವರು ಕ್ಷಮಿಸಬೇಕು’ ಎಂದು ಸಭೆಯಲ್ಲಿ ಹೇಳಿದರು ಎಂಬ ಸಂಗತಿಯನ್ನು ವಿಶ್ವನಾಥ್ ರಾವ್ ಕುಲಕರ್ಣಿ, ನಾಣಿಕೆರೆ ತಿಮ್ಮಯ್ಯ ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ. ಈ ಕುರಿತು ಸಂದೀಪ್ ಸಿಂಗ್ ಅವರನ್ನು ಸಂಪರ್ಕಿಸಿದಾಗ ಕರೆ ಸ್ವೀಕರಿಸಲಿಲ್ಲ.</p>.<p>ರಮೇಶ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಸಂದೀಪ್ ಸಿಂಗ್ ವಿರುದ್ಧ ಸೆ.1ರಂದು ವಾಲ್ಮೀಕಿ ನಾಯಕ ಸಮಾಜದವರು ಸಭೆ ಸೇರಿ, ಕ್ಷಮೆಯಾಚನೆಗೆ ಎರಡು ದಿನಗಳ ಗಡುವು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ಶಾಸಕ ರಮೇಶ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಸೋದರ ಅಳಿಯ, ಬಿಜೆಪಿ ಯುವ ಮುಖಂಡ ಸಂದೀಪ್ ಸಿಂಗ್, ಶನಿವಾರ ವಾಲ್ಮೀಕಿ ನಾಯಕ ಸಮಾಜದ ಕ್ಷಮೆಯಾಚಿಸಿದ್ದಾರೆ.</p>.<p>ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ ಅವರ ಮಧ್ಯಸ್ಥಿಕೆಯಲ್ಲಿ ನಗರದಲ್ಲಿ ನಡೆದ ಸಭೆಯಲ್ಲಿ ಏಳು ಕೇರಿಯ ವಾಲ್ಮೀಕಿ ನಾಯಕ ಸಮಾಜದ 50ಕ್ಕೂ ಹೆಚ್ಚು ಮುಖಂಡರು ಹಾಗೂ ಸಂದೀಪ್ ಸಿಂಗ್ ಪಾಲ್ಗೊಂಡಿದ್ದರು.</p>.<p>‘ವಾಲ್ಮೀಕಿ ಸಮಾಜದಿಂದಲೇ ನಿಮ್ಮ ಮಾವ ಆನಂದ್ ಸಿಂಗ್ ಇಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ನಾಲ್ಕು ಸಲ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಸಮಾಜ ನಿಮಗೇನು ಅನ್ಯಾಯ ಮಾಡಿದೆ’ ಎಂದು ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಉಪಾಧ್ಯಕ್ಷ ನಾಣಿಕೇರಿ ತಿಮ್ಮಯ್ಯ ಸೇರಿದಂತೆ ಸಮಾಜದ ಮುಖಂಡರು ಪ್ರಶ್ನಿಸಿದ್ದಾರೆ.</p>.<p>ಅದಕ್ಕೆ ಸಂದೀಪ್ ಸಿಂಗ್, ‘ನನ್ನಿಂದ ತಪ್ಪಾಗಿದೆ. ಭವಿಷ್ಯದಲ್ಲಿ ಈ ರೀತಿ ಮಾಡಲಾರೆ. ನನ್ನನ್ನು ಸಮಾಜದವರು ಕ್ಷಮಿಸಬೇಕು’ ಎಂದು ಸಭೆಯಲ್ಲಿ ಹೇಳಿದರು ಎಂಬ ಸಂಗತಿಯನ್ನು ವಿಶ್ವನಾಥ್ ರಾವ್ ಕುಲಕರ್ಣಿ, ನಾಣಿಕೆರೆ ತಿಮ್ಮಯ್ಯ ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ. ಈ ಕುರಿತು ಸಂದೀಪ್ ಸಿಂಗ್ ಅವರನ್ನು ಸಂಪರ್ಕಿಸಿದಾಗ ಕರೆ ಸ್ವೀಕರಿಸಲಿಲ್ಲ.</p>.<p>ರಮೇಶ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಸಂದೀಪ್ ಸಿಂಗ್ ವಿರುದ್ಧ ಸೆ.1ರಂದು ವಾಲ್ಮೀಕಿ ನಾಯಕ ಸಮಾಜದವರು ಸಭೆ ಸೇರಿ, ಕ್ಷಮೆಯಾಚನೆಗೆ ಎರಡು ದಿನಗಳ ಗಡುವು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>