ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಸೌಕರ್ಯಗಳ ವಿಸ್ಮಯ: ಹೊಸಪೇಟೆ ಸುರಂಗ ಮಾರ್ಗದ ಚಿತ್ರ ಟ್ವೀಟ್ ಮಾಡಿದ ಗಡ್ಕರಿ

Last Updated 19 ಜುಲೈ 2022, 9:13 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಅವರು ಅವರ ಟ್ವಿಟ್ಟರ್‌ ಖಾತೆಯಲ್ಲಿ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಸುರಂಗ ಮಾರ್ಗದ ಛಾಯಾಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ.

‘ನವ ಭಾರತದ ಮೂಲಸೌಕರ್ಯಗಳ ವಿಸ್ಮಯ’ ಎಂದು ಟ್ವೀಟ್‌ ಮಾಡಿರುವ ಅವರು ಮೂರು ಚಿತ್ರಗಳನ್ನು ಅದರೊಂದಿಗೆ ಟ್ಯಾಗ್‌ ಮಾಡಿದ್ದಾರೆ. ಕರ್ನಾಟಕದ ಹುನಗುಂದ–ಹೊಸಪೇಟೆ ಚತುಷ್ಪಥ ಕಾರ್ಯಾರಂಭ ಮಾಡಿದೆ. ಇದರಿಂದ ಕೇರಳ ಮತ್ತು ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸಿದಂತಾಗಿದೆ ಎಂದು ಬರೆದುಕೊಂಡಿದ್ದಾರೆ.

ಸುರಂಗ ಮಾರ್ಗಕ್ಕೆ ಹೊಂದಿಕೊಂಡಂತೆ ತುಂಗಭದ್ರಾ ಜಲಾಶಯವಿದ್ದು, ಇದು ಪ್ರಯಾಣಿಕರನ್ನು ಆಕರ್ಷಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT