<p><strong>ಹೊಸಪೇಟೆ (ವಿಜಯನಗರ):</strong> ಬುದ್ಧ, ಬಸವ ತತ್ವದ ಅನುಯಾಯಿಯೂ ಆಗಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಕಾಯಕಯೋಗಿ ಬಸವಣ್ಣ ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತ ಗೀತೆಗಳ ಬಿಡುಗಡೆ ಸಮಾರಂಭ ಫೆ.27ರಂದು ನಗರದಲ್ಲಿ ನಡೆಯಲಿದೆ.</p>.<p>‘ನಗರದ ಪುನೀತ್ ರಾಜ್ಕುಮಾರ್ ಮೈದಾನದಲ್ಲಿ ಅಂದು ಸಂಜೆ 4ರ ಬಳಿಕ ‘ಅಭಿಮಾನ ಸಮರ್ಪಣೆ’ ಕಾರ್ಯಕ್ರಮ ನಡೆಯಲಿದೆ. ಚಲನಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ರಚನೆಯ ಈ ಗೀತೆಗಳ ಬಿಡುಗಡೆ ಸಮಾರಂಭದಲ್ಲಿ ಪ್ರಖ್ಯಾತ ಗಾಯಕರಾದ ವಿಜಯ ಪ್ರಕಾಶ್, ಸಲ್ಮಾನ್ ಅಲಿ ಅವರು ಪಾಲ್ಗೊಂಡು ಗಾಯನ ಪ್ರಸ್ತುತಪಡಿಸಲಿದ್ದಾರೆ’ ಎಂದು ಫೌಂಡೇಶನ್ನ ಸಂಚಾಲಕರಾದ ಕವಿತಾ ರೆಡ್ಡಿ ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಬಸವಣ್ಣ, ಅಂಬೇಡ್ಕರ್ ಕುರಿತಂತೆ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವಂತಹ ಒಂದಿಷ್ಟು ಕೆಲಸ ಮಾಡಬೇಕು ಎಂಬ ನೆಲೆಯಲ್ಲಿ ಈ ಪ್ರಯತ್ನ ನಡೆದಿದೆ. 25 ಗೀತೆಗಳನ್ನು ರಚಿಸಿ ಬಿಡುಗಡೆ ಮಾಡುವ ಗುರಿ ಇದ್ದು, ಸದ್ಯ 10 ಗೀತೆಗಳನ್ನು ಬಿಡುಗಡೆ ಮಾಡಲಾಗುವುದು. ಅತ್ಯುತ್ತಮವಾಗಿ ರೀಲ್ ಮಾಡುವ ಮಕ್ಕಳಿಗೆ ಬಹುಮಾನವನ್ನೂ ಇಡಲಾಗಿದೆ’ ಎಂದರು.</p>.<p>ಬಸವತತ್ವ ಬಳಗದ ಮಾವಿನಹಳ್ಳಿ ಬಸವರಾಜ್, ಡಾ.ನಂದೀಶ್ವರ, ವಸುಕಿರಣ್, ನಿಂಬಗಲ್ ರಾಮಕೃಷ್ಣ ಅವರು ಪೂರಕ ಮಾಹಿತಿ ನೀಡಿದರು. ನಾಗೇಶ್ ಪಾಟೀಲ್, ಶಿವಕುಮಾರ್, ಬಸವರಾಜಪ್ಪ, ಗುಜ್ಜಲ್ ಗಣೇಶ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಬುದ್ಧ, ಬಸವ ತತ್ವದ ಅನುಯಾಯಿಯೂ ಆಗಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಕಾಯಕಯೋಗಿ ಬಸವಣ್ಣ ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತ ಗೀತೆಗಳ ಬಿಡುಗಡೆ ಸಮಾರಂಭ ಫೆ.27ರಂದು ನಗರದಲ್ಲಿ ನಡೆಯಲಿದೆ.</p>.<p>‘ನಗರದ ಪುನೀತ್ ರಾಜ್ಕುಮಾರ್ ಮೈದಾನದಲ್ಲಿ ಅಂದು ಸಂಜೆ 4ರ ಬಳಿಕ ‘ಅಭಿಮಾನ ಸಮರ್ಪಣೆ’ ಕಾರ್ಯಕ್ರಮ ನಡೆಯಲಿದೆ. ಚಲನಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ರಚನೆಯ ಈ ಗೀತೆಗಳ ಬಿಡುಗಡೆ ಸಮಾರಂಭದಲ್ಲಿ ಪ್ರಖ್ಯಾತ ಗಾಯಕರಾದ ವಿಜಯ ಪ್ರಕಾಶ್, ಸಲ್ಮಾನ್ ಅಲಿ ಅವರು ಪಾಲ್ಗೊಂಡು ಗಾಯನ ಪ್ರಸ್ತುತಪಡಿಸಲಿದ್ದಾರೆ’ ಎಂದು ಫೌಂಡೇಶನ್ನ ಸಂಚಾಲಕರಾದ ಕವಿತಾ ರೆಡ್ಡಿ ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಬಸವಣ್ಣ, ಅಂಬೇಡ್ಕರ್ ಕುರಿತಂತೆ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವಂತಹ ಒಂದಿಷ್ಟು ಕೆಲಸ ಮಾಡಬೇಕು ಎಂಬ ನೆಲೆಯಲ್ಲಿ ಈ ಪ್ರಯತ್ನ ನಡೆದಿದೆ. 25 ಗೀತೆಗಳನ್ನು ರಚಿಸಿ ಬಿಡುಗಡೆ ಮಾಡುವ ಗುರಿ ಇದ್ದು, ಸದ್ಯ 10 ಗೀತೆಗಳನ್ನು ಬಿಡುಗಡೆ ಮಾಡಲಾಗುವುದು. ಅತ್ಯುತ್ತಮವಾಗಿ ರೀಲ್ ಮಾಡುವ ಮಕ್ಕಳಿಗೆ ಬಹುಮಾನವನ್ನೂ ಇಡಲಾಗಿದೆ’ ಎಂದರು.</p>.<p>ಬಸವತತ್ವ ಬಳಗದ ಮಾವಿನಹಳ್ಳಿ ಬಸವರಾಜ್, ಡಾ.ನಂದೀಶ್ವರ, ವಸುಕಿರಣ್, ನಿಂಬಗಲ್ ರಾಮಕೃಷ್ಣ ಅವರು ಪೂರಕ ಮಾಹಿತಿ ನೀಡಿದರು. ನಾಗೇಶ್ ಪಾಟೀಲ್, ಶಿವಕುಮಾರ್, ಬಸವರಾಜಪ್ಪ, ಗುಜ್ಜಲ್ ಗಣೇಶ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>