<p><strong>ಹೊಸಪೇಟೆ (ವಿಜಯನಗರ):</strong> ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರ ವೈಯಕ್ತಿಕ ಆರ್ಥಿಕ ನೆರವಿನೊಂದಿಗೆ ರಾಜ್ಯದ 470 ಯಾತ್ರಿಗಳಿಗೆ ಉಮ್ರಾ ಭಾಗ್ಯ ದೊರೆತಿದ್ದು, ಜಿಲ್ಲೆಯ 15 ಮಂದಿಗೆ ಶನಿವಾರ ಇಲ್ಲಿ ಇಲ್ಲಿ ಬೀಳ್ಕೊಡಲಾಯಿತು.</p>.<p>ಇಲ್ಲಿನ ಅಂಜುಮನ್ ಶಾದಿಮಹಲ್ನಲ್ಲಿ ಅಂಜುಮನ್ ಕಮಿಟಿಯ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರ (ಹುಡಾ) ಅಧ್ಯಕ್ಷ ಹಾಗೂ ಕಮಿಟಿಯ ಅಧ್ಯಕ್ಷ ಎಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಮಾತನಾಡಿ, ಸಚಿವರ ಮಾನವೀಯ ಕಾರ್ಯವನ್ನು ಶ್ಲಾಘಿಸಿ ಇಂದು ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇವೆ, ಸಚಿವರು ಈ ಮೂಲಕ ಮಹಾದಾನಿ ಎನಿಸಿದ್ದಾರೆ ಎಂದರು.</p>.<p>‘ರಾಜ್ಯದ ಅನೇಕ ಬಡ ಮುಸ್ಲಿಂರಿಗೆ ಹಣಕಾಸಿನ ಮುಗ್ಗಟ್ಟಿನಿಂದ ಉಮ್ರಾ ಯಾತ್ರೆ ಕನಸಿನ ಮಾತಾಗಿತ್ತು, ಅದರೆ ಸಚಿವರ ಈ ನಿಸ್ವಾರ್ಥ ಸೇವೆ ಮತ್ತು ಬಡವರ ಮೇಲಿನ ಕಾಳಜಿಯಿಂದ ಯಾತ್ರಿಗಳ ಕನಸು ನನಸಾಗಿದೆ. ಸಚಿವರು ಈಗಾಗಲೇ 1,959 ಮಂದಿಯನ್ನು ಉಮ್ರಾಗೆ ಕಳುಹಿಸಿಕೊಟ್ಟಿದ್ದಾರೆ’ ಎಂದರು.</p>.<p>ಯಾತ್ರಿಗಳು ಮಾತನಾಡಿ, ಮಕ್ಕಾ ಯಾತ್ರೆ ಕೈಗೊಳ್ಳಲು ನಮಗೆ ಸಹಾಯ ಮಾಡಿದ ಸಚಿವರ ಆರೋಗ್ಯ ಮತ್ತು ಲೋಕ ಕಲ್ಯಾಣಕ್ಕಾಗಿ ಮಕ್ಕಾದಲ್ಲಿ ಪ್ರಾರ್ಥಿಸುತ್ತೇವೆ ಎಂದು ಭಾವುಕರಾದರು.</p>.<p>ಅಂಜುಮನ್ ಕಮಿಟಿಯ ಪದಾಧಿಕಾರಿಗಳಾದ ಅನ್ಸರ್ ಬಾಷಾ, ಪೈರೋಜ್ ಖಾನ್, ಎಂ.ಡಿ.ಅಭುಬ್ ಖರ್, ಡಾ. ದರ್ವೇಶ, ಎಂ.ಡಿ. ಮೋಸಿನ್ ಕೊತ್ವಲ್, ಸದ್ದಾಂ ಹುಸೇನ್, ಸಮುದಾಯದ ಮುಖಂಡರಾಧ ಮುಷೀರ್ ಅಹಮದ್, ಗಫೂರ ಸಾಬ್, ಶೇಖ್ ಅಹಮ್ಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರ ವೈಯಕ್ತಿಕ ಆರ್ಥಿಕ ನೆರವಿನೊಂದಿಗೆ ರಾಜ್ಯದ 470 ಯಾತ್ರಿಗಳಿಗೆ ಉಮ್ರಾ ಭಾಗ್ಯ ದೊರೆತಿದ್ದು, ಜಿಲ್ಲೆಯ 15 ಮಂದಿಗೆ ಶನಿವಾರ ಇಲ್ಲಿ ಇಲ್ಲಿ ಬೀಳ್ಕೊಡಲಾಯಿತು.</p>.<p>ಇಲ್ಲಿನ ಅಂಜುಮನ್ ಶಾದಿಮಹಲ್ನಲ್ಲಿ ಅಂಜುಮನ್ ಕಮಿಟಿಯ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರ (ಹುಡಾ) ಅಧ್ಯಕ್ಷ ಹಾಗೂ ಕಮಿಟಿಯ ಅಧ್ಯಕ್ಷ ಎಚ್.ಎನ್.ಮೊಹಮ್ಮದ್ ಇಮಾಮ್ ನಿಯಾಜಿ ಮಾತನಾಡಿ, ಸಚಿವರ ಮಾನವೀಯ ಕಾರ್ಯವನ್ನು ಶ್ಲಾಘಿಸಿ ಇಂದು ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇವೆ, ಸಚಿವರು ಈ ಮೂಲಕ ಮಹಾದಾನಿ ಎನಿಸಿದ್ದಾರೆ ಎಂದರು.</p>.<p>‘ರಾಜ್ಯದ ಅನೇಕ ಬಡ ಮುಸ್ಲಿಂರಿಗೆ ಹಣಕಾಸಿನ ಮುಗ್ಗಟ್ಟಿನಿಂದ ಉಮ್ರಾ ಯಾತ್ರೆ ಕನಸಿನ ಮಾತಾಗಿತ್ತು, ಅದರೆ ಸಚಿವರ ಈ ನಿಸ್ವಾರ್ಥ ಸೇವೆ ಮತ್ತು ಬಡವರ ಮೇಲಿನ ಕಾಳಜಿಯಿಂದ ಯಾತ್ರಿಗಳ ಕನಸು ನನಸಾಗಿದೆ. ಸಚಿವರು ಈಗಾಗಲೇ 1,959 ಮಂದಿಯನ್ನು ಉಮ್ರಾಗೆ ಕಳುಹಿಸಿಕೊಟ್ಟಿದ್ದಾರೆ’ ಎಂದರು.</p>.<p>ಯಾತ್ರಿಗಳು ಮಾತನಾಡಿ, ಮಕ್ಕಾ ಯಾತ್ರೆ ಕೈಗೊಳ್ಳಲು ನಮಗೆ ಸಹಾಯ ಮಾಡಿದ ಸಚಿವರ ಆರೋಗ್ಯ ಮತ್ತು ಲೋಕ ಕಲ್ಯಾಣಕ್ಕಾಗಿ ಮಕ್ಕಾದಲ್ಲಿ ಪ್ರಾರ್ಥಿಸುತ್ತೇವೆ ಎಂದು ಭಾವುಕರಾದರು.</p>.<p>ಅಂಜುಮನ್ ಕಮಿಟಿಯ ಪದಾಧಿಕಾರಿಗಳಾದ ಅನ್ಸರ್ ಬಾಷಾ, ಪೈರೋಜ್ ಖಾನ್, ಎಂ.ಡಿ.ಅಭುಬ್ ಖರ್, ಡಾ. ದರ್ವೇಶ, ಎಂ.ಡಿ. ಮೋಸಿನ್ ಕೊತ್ವಲ್, ಸದ್ದಾಂ ಹುಸೇನ್, ಸಮುದಾಯದ ಮುಖಂಡರಾಧ ಮುಷೀರ್ ಅಹಮದ್, ಗಫೂರ ಸಾಬ್, ಶೇಖ್ ಅಹಮ್ಮದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>