<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನ ಗಾದಿಗನೂರಿನಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಗಾಯಗೊಂಡವರನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತೋರಣಗಲ್ನ ಸಂಜೀವಿನಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.</p><p>ಇಲ್ಲಿ ಜಿಲ್ಲಾ ನ್ಯಾಯಾಲಯ ಉದ್ಘಾಟನೆ ನಡೆದ ತಕ್ಚಣ ಗಾದಿಗನೂರಿಗೆ ತೆರಳಿದ ಅವರು ಘಟನೆ ನಡೆದ ಸ್ಥಳ ಪರಿಶೀಲಿಸಿದರು. ಬಳಿಕ ಆಸ್ಪತ್ರೆ ಗೆ ತೆರಳಿದರು.</p><p>'ಸಿಲಿಂಡರ್ ಸ್ಪೋಟ ಘಟನೆ ನಡೆದಿದೆ, ಈ ಘಟನೆ ನಡೆಯಬಾರದಿತ್ತು. ಜಗತ್ತು ನೋಡದ ಎರಡು ವರ್ಷದ ಮಗು ಶೇ 70 ಗಾಯವಾಗಿದೆ, ನೋಡಿ ದು:ಖವಾಗಿದೆ . ಆ ಮಗು ತಂದೆ ಜೈಲಲ್ಲಿದ್ದಾರೆ ಎಂಬ ಮಾಹಿತಿ ಇದೆ. ಕೆಲವರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಿದೆ. ಬೆಂಗಳೂರಿನಿಂದ ವೈದ್ಯರು ಬರ್ತಾರೆ, ಕೆಲವರನ್ನು ಬೇರೆ, ಬೇರೆ ಕಡೆ ರೆಫರ್ ಮಾಡಲಾಗಿದೆ' ಎಂದು ಸಚಿವರು ಬಳಿಕ ಮಾಧ್ಯಮದವರಿಗೆ ಹೇಳಿದರು.</p>.ಗಾದಿಗನೂರಿನಲ್ಲಿ ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನ ಗಾದಿಗನೂರಿನಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಗಾಯಗೊಂಡವರನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತೋರಣಗಲ್ನ ಸಂಜೀವಿನಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.</p><p>ಇಲ್ಲಿ ಜಿಲ್ಲಾ ನ್ಯಾಯಾಲಯ ಉದ್ಘಾಟನೆ ನಡೆದ ತಕ್ಚಣ ಗಾದಿಗನೂರಿಗೆ ತೆರಳಿದ ಅವರು ಘಟನೆ ನಡೆದ ಸ್ಥಳ ಪರಿಶೀಲಿಸಿದರು. ಬಳಿಕ ಆಸ್ಪತ್ರೆ ಗೆ ತೆರಳಿದರು.</p><p>'ಸಿಲಿಂಡರ್ ಸ್ಪೋಟ ಘಟನೆ ನಡೆದಿದೆ, ಈ ಘಟನೆ ನಡೆಯಬಾರದಿತ್ತು. ಜಗತ್ತು ನೋಡದ ಎರಡು ವರ್ಷದ ಮಗು ಶೇ 70 ಗಾಯವಾಗಿದೆ, ನೋಡಿ ದು:ಖವಾಗಿದೆ . ಆ ಮಗು ತಂದೆ ಜೈಲಲ್ಲಿದ್ದಾರೆ ಎಂಬ ಮಾಹಿತಿ ಇದೆ. ಕೆಲವರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಿದೆ. ಬೆಂಗಳೂರಿನಿಂದ ವೈದ್ಯರು ಬರ್ತಾರೆ, ಕೆಲವರನ್ನು ಬೇರೆ, ಬೇರೆ ಕಡೆ ರೆಫರ್ ಮಾಡಲಾಗಿದೆ' ಎಂದು ಸಚಿವರು ಬಳಿಕ ಮಾಧ್ಯಮದವರಿಗೆ ಹೇಳಿದರು.</p>.ಗಾದಿಗನೂರಿನಲ್ಲಿ ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>