ಚುನಾವಣೆಗೂ ಮುನ್ನ ಬಿಜೆಪಿಯಿಂದ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವೆಂದೇ ಹೇಳಲಾಗಿತ್ತು. ಆದರೆ, ಮತ್ತೊಮ್ಮೆ ಕೊಂಡಯ್ಯನವರೇ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ವಿಷಯ ತಿಳಿದು ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಗೊತ್ತಾಗಿದೆ. ಈ ಕುರಿತು ಪಾಟೀಲ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ, ‘ಈ ಕುರಿತು ನಾನೇನೂ ಪ್ರತಿಕ್ರಿಯಿಸುವುದಿಲ್ಲ’ ಎಂದಷ್ಟೇ ಹೇಳಿದ್ದಾರೆ. ಪಾಟೀಲ ಅವರು ಸ್ಪರ್ಧೆಗೆ ಒಲವು ತೋರಿಸದ ಕಾರಣಕ್ಕಾಗಿಯೇ ಅಭ್ಯರ್ಥಿ ಆಯ್ಕೆ ಬಿಜೆಪಿಗೆ ಕಗ್ಗಂಟಾಗಿದೆ.