<p><strong>ಹರಪನಹಳ್ಳಿ:</strong> ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ವಹಿಸಿದ ಕೂಲಿಯ ಬಾಕಿ ಹಣ ಪಾವತಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಯುವಜನ ಫೆಡರೇಷನ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಬಿ.ಆರ್. ಅಂಬೇಡ್ಕರ್ ವೃತ್ತದಿಂದ ತಾಲ್ಲೂಕು ಆಡಳಿತ ಸೌಧದ ಆವರಣದ ವರೆಗೂ ಮೆರವಣಿಗೆ ನಡೆಸಲಾಯಿತು.</p>.<p>‘ತಾಲ್ಲೂಕಿನಲ್ಲಿ 66 ಸಾವಿರ ಕುಟುಂಬಗಳು ಉದ್ಯೋಗ ಖಾತ್ರಿ ಅವಲಂಬಿಸಿವೆ. ನಿತ್ಯ 34 ಸಾವಿರ ಕುಟುಂಬ ಕೆಲಸ ಮಾಡುತ್ತಿವೆ. ಆದರೆ ಏಪ್ರಿಲ್ 22ರಿಂದ ಕೂಲಿ ಹಣ ಪಾವತಿಸದ ಪರಿಣಾಮ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ’ ಎಂದು ಪ್ರತಿಭಟನಕಾರರು ದೂರಿದರು.</p>.<p>‘11 ಸಾವಿರ ಕುಟುಂಬಗಳಿಗೆ 650 ನಿಧಿ ವರ್ಗಾವಣೆ ಆದೇಶ (ಎಫ್ಟಿಒ) ಬಾಕಿ ಇವೆ. ಕೆಲಸ ಮಾಡಿದ 15 ದಿನದೊಳಗಾಗಿ ಕೂಲಿ ಪಾವತಿಸುವ ನಿಯಮವಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಆನ್ಲೈನ್ ಕಾರ್ಡ್ನಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳಿಗೆ ಮ್ಯಾನುವಲ್ ಕಾರ್ಡ್ ವಿತರಿಸಬೇಕು. 200 ಮಾನವ ದಿನಗಳಿಗೆ ಕೂಲಿ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಬಳಿಗನೂರು ಕೊಟ್ರೇಶ್, ರಮೇಶನಾಯ್ಕ, ಅನಿಲ್ ಕುಮಾರ, ಭಾಗ್ಯಮ್ಮ, ನೀಲಮ್ಮ, ಅಭಿಷೇಕ, ಹಾವೇರಿ ದೊಡ್ಡ ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ವಹಿಸಿದ ಕೂಲಿಯ ಬಾಕಿ ಹಣ ಪಾವತಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಯುವಜನ ಫೆಡರೇಷನ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ಬಿ.ಆರ್. ಅಂಬೇಡ್ಕರ್ ವೃತ್ತದಿಂದ ತಾಲ್ಲೂಕು ಆಡಳಿತ ಸೌಧದ ಆವರಣದ ವರೆಗೂ ಮೆರವಣಿಗೆ ನಡೆಸಲಾಯಿತು.</p>.<p>‘ತಾಲ್ಲೂಕಿನಲ್ಲಿ 66 ಸಾವಿರ ಕುಟುಂಬಗಳು ಉದ್ಯೋಗ ಖಾತ್ರಿ ಅವಲಂಬಿಸಿವೆ. ನಿತ್ಯ 34 ಸಾವಿರ ಕುಟುಂಬ ಕೆಲಸ ಮಾಡುತ್ತಿವೆ. ಆದರೆ ಏಪ್ರಿಲ್ 22ರಿಂದ ಕೂಲಿ ಹಣ ಪಾವತಿಸದ ಪರಿಣಾಮ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ’ ಎಂದು ಪ್ರತಿಭಟನಕಾರರು ದೂರಿದರು.</p>.<p>‘11 ಸಾವಿರ ಕುಟುಂಬಗಳಿಗೆ 650 ನಿಧಿ ವರ್ಗಾವಣೆ ಆದೇಶ (ಎಫ್ಟಿಒ) ಬಾಕಿ ಇವೆ. ಕೆಲಸ ಮಾಡಿದ 15 ದಿನದೊಳಗಾಗಿ ಕೂಲಿ ಪಾವತಿಸುವ ನಿಯಮವಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಆನ್ಲೈನ್ ಕಾರ್ಡ್ನಲ್ಲಿ ಕೆಲಸ ಮಾಡುತ್ತಿರುವ ಕುಟುಂಬಗಳಿಗೆ ಮ್ಯಾನುವಲ್ ಕಾರ್ಡ್ ವಿತರಿಸಬೇಕು. 200 ಮಾನವ ದಿನಗಳಿಗೆ ಕೂಲಿ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಬಳಿಗನೂರು ಕೊಟ್ರೇಶ್, ರಮೇಶನಾಯ್ಕ, ಅನಿಲ್ ಕುಮಾರ, ಭಾಗ್ಯಮ್ಮ, ನೀಲಮ್ಮ, ಅಭಿಷೇಕ, ಹಾವೇರಿ ದೊಡ್ಡ ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>