ಹೊಸಪೇಟೆ (ವಿಜಯನಗರ): ಅಪ್ರಾಪ್ತ ಬಾಲಕ ಸೇರಿದಂತೆ ಮೂವರು ಮೊಬೈಲ್ ಕಳ್ಳರನ್ನು ಇಲ್ಲಿನ ಪಟ್ಟಣ ಠಾಣೆ ಪೊಲೀಸರು ಸೋಮವಾರ ನಗರದ ಬಸ್ ನಿಲ್ದಾಣದ ಬಳಿ ವಶಕ್ಕೆ ತೆಗೆದುಕೊಂಡಿದ್ದಾರೆ.
‘ವಿವಿಧ ಕಂಪನಿಗಳ ₹53 ಸಾವಿರ ಮೌಲ್ಯದ ಕದ್ದ ಮೊಬೈಲ್ಗಳನ್ನು ಇಟ್ಟುಕೊಂಡು ಬಸ್ ನಿಲ್ದಾಣದ ಬಳಿ ತಿರುಗಾಡುತ್ತಿದ್ದರು. ಮೂವರನ್ನು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಗಂಗಾವತಿಯ ಉಂಚೆಮ್ಮ ವೀರೇಶ (19), ಮಂಜುನಾಥ ಯಮನೂರಪ್ಪ (19) ವಶದಲ್ಲಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಎಸ್ಐ ಕೋದಂಡಪಾಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.