<p><strong>ಹೊಸಪೇಟೆ (ವಿಜಯನಗರ):</strong> ‘ಅನುವಾದವು ಕ್ರಿಯಾಶೀಲತೆಯನ್ನು ಬೇಡುವ ಕೆಲಸ. ಬಲಿಷ್ಠ ಸಮುದಾಯಗಳಿಗೆ ಅನುವಾದದ ಅಗತ್ಯವಿಲ್ಲದಿರಬಹುದು, ಆದರೆ ಹೊಸತನ್ನು ಬಯಸುವ, ಸ್ವೀಕರಿಸುವ ತಳ ಸಮುದಾಯಗಳಿಗೆ ಅಗತ್ಯವಿದೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟಗಿರಿ ದಳವಾಯಿ ಹೇಳಿದರು.</p>.<p>ಕ್ಯಾಂಪಸ್ನಲ್ಲಿ ಶುಕ್ರವಾರ ಭಾಷಾಂತರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳ ವತಿಯಿಂದ ಹಮ್ಮಿಕೊಂಡ ಪ್ರೊ.ಮೋಹನ ಕುಂಟಾರ್ ದತ್ತಿನಿಧಿ ಉದ್ಘಾಟನೆ, ಪುಸ್ತಕ ಬಿಡುಗಡೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅನುವಾದದ ಹೆಜ್ಜೆ ಗುರುತುಗಳು’ ಪುಸ್ತಕವು ಸಮಕಾಲೀನತೆ, ಒತ್ತಾಸೆ ಮತ್ತು ಒಳನೋಟಗಳನ್ನು ಕಟ್ಟಿಕೊಡುತ್ತದೆ. ಈ ಕೃತಿ ಓದುಗರು ಮತ್ತು ಓದಿನ ನಡುವಿನ ಸೂಕ್ಷ್ಮಗಳಿಗೆ ಮತ್ತು ಕನ್ನಡ, ತುಳು, ಮಲೆಯಾಳಂ ಅನುವಾದದ ಬಗೆಗಿನ ಪ್ರೀತಿ ಹಾಗೂ ನಿಷ್ಠುರತೆಗೆ ಧ್ವನಿಯಾಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿ ಮಾತನಾಡಿ, ‘ಮೋಹನ ಕುಂಟಾರ್ ಅವರು ಭಾಷಾಂತರಕ್ಕೆ ವಿದ್ವತ್ ವಲಯದಲ್ಲಿ ಸ್ಥಾನ ಕಲ್ಪಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ’ ಎಂದರು.</p>.<p>ಕುಲಸಚಿವ ಪ್ರೊ. ವಿಜಯ್ ಪೂಣಚ್ಚ ತಂಬಂಡ, ದ್ರಾವಿಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿ.ವೆಂಕಟೇಶ್ ಅವರು ಕುಂಟಾರ್ ಅವರ ವ್ಯಕ್ತಿತ್ವದ ಪರಿಚಯ ಮಾಡಿಕೊಟ್ಟರು.</p>.<p>ದತ್ತಿನಿಧಿ ಸ್ಥಾಪಕರಾದ ಪ್ರೊ.ಸೌಮ್ಯಲತಾ ಪಿ., ಧಾರವಾಡದ ವಿಶ್ವನಾಥ ನಾಗರಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ‘ಅನುವಾದವು ಕ್ರಿಯಾಶೀಲತೆಯನ್ನು ಬೇಡುವ ಕೆಲಸ. ಬಲಿಷ್ಠ ಸಮುದಾಯಗಳಿಗೆ ಅನುವಾದದ ಅಗತ್ಯವಿಲ್ಲದಿರಬಹುದು, ಆದರೆ ಹೊಸತನ್ನು ಬಯಸುವ, ಸ್ವೀಕರಿಸುವ ತಳ ಸಮುದಾಯಗಳಿಗೆ ಅಗತ್ಯವಿದೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟಗಿರಿ ದಳವಾಯಿ ಹೇಳಿದರು.</p>.<p>ಕ್ಯಾಂಪಸ್ನಲ್ಲಿ ಶುಕ್ರವಾರ ಭಾಷಾಂತರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳ ವತಿಯಿಂದ ಹಮ್ಮಿಕೊಂಡ ಪ್ರೊ.ಮೋಹನ ಕುಂಟಾರ್ ದತ್ತಿನಿಧಿ ಉದ್ಘಾಟನೆ, ಪುಸ್ತಕ ಬಿಡುಗಡೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಅನುವಾದದ ಹೆಜ್ಜೆ ಗುರುತುಗಳು’ ಪುಸ್ತಕವು ಸಮಕಾಲೀನತೆ, ಒತ್ತಾಸೆ ಮತ್ತು ಒಳನೋಟಗಳನ್ನು ಕಟ್ಟಿಕೊಡುತ್ತದೆ. ಈ ಕೃತಿ ಓದುಗರು ಮತ್ತು ಓದಿನ ನಡುವಿನ ಸೂಕ್ಷ್ಮಗಳಿಗೆ ಮತ್ತು ಕನ್ನಡ, ತುಳು, ಮಲೆಯಾಳಂ ಅನುವಾದದ ಬಗೆಗಿನ ಪ್ರೀತಿ ಹಾಗೂ ನಿಷ್ಠುರತೆಗೆ ಧ್ವನಿಯಾಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿ ಮಾತನಾಡಿ, ‘ಮೋಹನ ಕುಂಟಾರ್ ಅವರು ಭಾಷಾಂತರಕ್ಕೆ ವಿದ್ವತ್ ವಲಯದಲ್ಲಿ ಸ್ಥಾನ ಕಲ್ಪಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ’ ಎಂದರು.</p>.<p>ಕುಲಸಚಿವ ಪ್ರೊ. ವಿಜಯ್ ಪೂಣಚ್ಚ ತಂಬಂಡ, ದ್ರಾವಿಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿ.ವೆಂಕಟೇಶ್ ಅವರು ಕುಂಟಾರ್ ಅವರ ವ್ಯಕ್ತಿತ್ವದ ಪರಿಚಯ ಮಾಡಿಕೊಟ್ಟರು.</p>.<p>ದತ್ತಿನಿಧಿ ಸ್ಥಾಪಕರಾದ ಪ್ರೊ.ಸೌಮ್ಯಲತಾ ಪಿ., ಧಾರವಾಡದ ವಿಶ್ವನಾಥ ನಾಗರಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>