<p><strong>ಹೊಸಪೇಟೆ (ವಿಜಯನಗರ</strong>): ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಎಂಟನೆ ಅಥವಾ ಒಂಬತ್ತನೇ ತರಗತಿಯ ಅಂಕಗಳನ್ನು ಆಧರಿಸಿ ಪ್ರೋತ್ಸಾಹ ಅಂಕ ನೀಡಬೇಕೆಂದು ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಸಮಿತಿ ಆಗ್ರಹಿಸಿದೆ.</p>.<p>ಸಂಘಟನೆಗಳ ಮುಖಂಡರು ಮಂಗಳವಾರ ನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಸಲ್ಲಿಸಿ, ಒತ್ತಾಯಿಸಿದರು.</p>.<p>ಕೋವಿಡ್ ಲಾಕ್ಡೌನ್ನಿಂದ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪಾಠ ಹೇಳಿಕೊಡಲಾಗಿದೆ. ಆದರೆ, ರೈತರು, ದಲಿತರು, ಹಿಂದುಳಿದ ವರ್ಗದ ಮಕ್ಕಳು, ಗುಡ್ಡಗಾಡು ಪ್ರದೇಶದವರ ಮಕ್ಕಳು ಅದರಿಂದ ವಂಚಿತರಾಗಿದ್ದಾರೆ. ಇನ್ನಷ್ಟೇ ಅವರು ಮುಖ್ಯ ವಾಹಿನಿಗೆ ಬರಬೇಕು. ಡಿಜಿಟಲ್ ಶಿಕ್ಷಣ ಇನ್ನೂ ಅವರಿಗೆ ದೂರದ ಮಾತು. ಹಾಗಾಗಿ ಒಂದುವೇಳೆ ಈ ವರ್ಗದ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿ, ಅವರ ಎಂಟನೇ ಅಥವಾ ಒಂಬತ್ತನೇ ತರಗತಿಯ ಅಂಕಗಳನ್ನು ಆಧರಿಸಿ ಅವರಿಗೆ ಅಂಕ ಕೊಡಬೇಕು ಎಂದು ಆಗ್ರಹಿಸಿದರು.</p>.<p>ಕೋವಿಡ್ ಲಾಕ್ಡೌನ್ ನಗರ ಹಾಗೂ ಗ್ರಾಮೀಣ ಪ್ರದೇಶದವರು, ಅವಕಾಶದಿಂದ ವಂಚಿತರಾದ ಮಕ್ಕಳ ನಡುವೆ ದೊಡ್ಡ ಕಂದಕವನ್ನೇ ಸೃಷ್ಟಿಸಿದೆ. ಸರ್ಕಾರ ಎಲ್ಲ ಆಯಾಮದಲ್ಲಿ ಯೋಚಿಸಿ, ಮುಖ್ಯವಾಹಿನಿಯಿಂದ ದೂರ ಇರುವವರ ಭವಿಷ್ಯದ ದೃಷ್ಟಿಯಿಂದ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆ ಜಿಲ್ಲಾ ಅಧ್ಯಕ್ಷ ಬಿ. ಗೋಣಿಬಸಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಎ. ಕುಮಾರಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಎಂ. ಬಸವರಾಜ, ಮುಖಂಡರಾದ ಗುರುಬಸಯ್ಯ, ಜಿ. ಮೆಹಬೂಬ್ ಸಾಬ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ</strong>): ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಎಂಟನೆ ಅಥವಾ ಒಂಬತ್ತನೇ ತರಗತಿಯ ಅಂಕಗಳನ್ನು ಆಧರಿಸಿ ಪ್ರೋತ್ಸಾಹ ಅಂಕ ನೀಡಬೇಕೆಂದು ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಸಮಿತಿ ಆಗ್ರಹಿಸಿದೆ.</p>.<p>ಸಂಘಟನೆಗಳ ಮುಖಂಡರು ಮಂಗಳವಾರ ನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಸಲ್ಲಿಸಿ, ಒತ್ತಾಯಿಸಿದರು.</p>.<p>ಕೋವಿಡ್ ಲಾಕ್ಡೌನ್ನಿಂದ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪಾಠ ಹೇಳಿಕೊಡಲಾಗಿದೆ. ಆದರೆ, ರೈತರು, ದಲಿತರು, ಹಿಂದುಳಿದ ವರ್ಗದ ಮಕ್ಕಳು, ಗುಡ್ಡಗಾಡು ಪ್ರದೇಶದವರ ಮಕ್ಕಳು ಅದರಿಂದ ವಂಚಿತರಾಗಿದ್ದಾರೆ. ಇನ್ನಷ್ಟೇ ಅವರು ಮುಖ್ಯ ವಾಹಿನಿಗೆ ಬರಬೇಕು. ಡಿಜಿಟಲ್ ಶಿಕ್ಷಣ ಇನ್ನೂ ಅವರಿಗೆ ದೂರದ ಮಾತು. ಹಾಗಾಗಿ ಒಂದುವೇಳೆ ಈ ವರ್ಗದ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿ, ಅವರ ಎಂಟನೇ ಅಥವಾ ಒಂಬತ್ತನೇ ತರಗತಿಯ ಅಂಕಗಳನ್ನು ಆಧರಿಸಿ ಅವರಿಗೆ ಅಂಕ ಕೊಡಬೇಕು ಎಂದು ಆಗ್ರಹಿಸಿದರು.</p>.<p>ಕೋವಿಡ್ ಲಾಕ್ಡೌನ್ ನಗರ ಹಾಗೂ ಗ್ರಾಮೀಣ ಪ್ರದೇಶದವರು, ಅವಕಾಶದಿಂದ ವಂಚಿತರಾದ ಮಕ್ಕಳ ನಡುವೆ ದೊಡ್ಡ ಕಂದಕವನ್ನೇ ಸೃಷ್ಟಿಸಿದೆ. ಸರ್ಕಾರ ಎಲ್ಲ ಆಯಾಮದಲ್ಲಿ ಯೋಚಿಸಿ, ಮುಖ್ಯವಾಹಿನಿಯಿಂದ ದೂರ ಇರುವವರ ಭವಿಷ್ಯದ ದೃಷ್ಟಿಯಿಂದ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆ ಜಿಲ್ಲಾ ಅಧ್ಯಕ್ಷ ಬಿ. ಗೋಣಿಬಸಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಎ. ಕುಮಾರಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಎಂ. ಬಸವರಾಜ, ಮುಖಂಡರಾದ ಗುರುಬಸಯ್ಯ, ಜಿ. ಮೆಹಬೂಬ್ ಸಾಬ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>