<p><strong>ಅರಸೀಕೆರೆ(ಉಚ್ಚಂಗಿದುರ್ಗ): </strong>ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರ ವೈದ್ಯರ ಕೊರತೆ ಹಿನ್ನಲೆಯಲ್ಲಿ ಮಂಜೂರಾಗಿದ್ದ ಜನ ಔಷಧ ಕೇಂದ್ರ ಕೈ ತಪ್ಪಿದಂತಾಗಿದೆ ಸಂಸದ ವೈ.ದೇವೇಂದ್ರಪ್ಪ ಕಿಡಿಕಾರಿದರು.</p>.<p>ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಅತಿ ಹೆಚ್ಚು ಜನ ಸಂಖ್ಯೆ ಹೊಂದಿರುವ ಹೋಬಳಿ ಕೇಂದ್ರ ಇದಾಗಿದ್ದು, ಬಡ ಕಾರ್ಮಿಕ ಕುಟುಂಬಗಳೇ ಅಧಿಕವಾಗಿದೆ. ಬಡವರಿಗೆ ಕಡಿಮೆ ದರದಲ್ಲಿ ಔಷಧ ಸಿಗಬೇಕು ಎನ್ನುವ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ಆಶಯಕ್ಕೆ ಹಿನ್ನಡೆಯಾದಂತಿದೆ. ಇದಕ್ಕೆ ಅಧಿಕಾರಿಗಳೇ ನೇರ ಹೊಣೆ ಎಂದು ಹೇಳಿದರು.</p>.<p>ಆಸ್ಪತ್ರೆ ಶವಗಾರ ದುರಸ್ತಿ ಕಾಮಗಾರಿ ಆರಂಭಗೊಂಡು ವರ್ಷವೇ ಕಳೆದು ಹೋದರು, ಕಾಮಗಾರಿ ಪೂರ್ಣಗೊಂಡಿಲ್ಲ ಈ ಕುರಿತ ಗ್ರಾಮಸ್ಥರು ದೂರು ಸಲ್ಲಿಸಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕೋವಿಡ್ ನಿರ್ವಹಣೆಯಲ್ಲಿ ಬಳ್ಳಾರಿ ಜಿಲ್ಲೆ ಗಮನಾರ್ಹ ಸಾಧನೆ ಮಾಡಿದೆ. ಹಾಗೆಯೇ ಕೋವಿಡ್ ಲಸಿಕೆ ವಿತರಣೆಯಲ್ಲಿ ಹರಪನಹಳ್ಳಿ ತಾಲೂಕು ಪ್ರಗತಿ ಕಂಡಿದೆ.</p>.<p>ಕೋವಿಡ್ ರೂಪಾಂತರಿ ಓಮೈಕ್ರಾನ್ ಕಡಿವಾಣಕ್ಕೆ ಸರ್ಕಾರ ರಾತ್ರಿ ಕರ್ಪ್ಯು ಜಾರಿಗೆ ತಂದಿದೆ. ಸಾರ್ವಜನಿಕರು ಕಟ್ಟಿನಿಟ್ಟಾಗಿ ಪಾಲಿಸಿ ಸೋಂಕು ಕಡಿವಾಣಕ್ಕೆ ಸಹಕರಿಸಬೇಕು.</p>.<p>ಗ್ರಾಮ ದೇವತೆ ದಂಡಿನ ದುರ್ಗಮ್ಮ ಕಾರ್ತಿಕೋತ್ಸವದ ಅಂಗವಾಗಿ ನಡೆಯುವ ಜಾತ್ರೆಯನ್ನು ಸರಳ ರೀತಿಯಲ್ಲಿ ಮನೆಯಲ್ಲಿಯೇ ಆಚರಿಸಬೇಕು. ಈಗಾಗಲೇ ಸೀಮಿತ ಭಕ್ತರನ್ನೊಳಗೊಂದು ಪಾರಂಪರಿಕ ಆಚರಣೆ ಮಾಡುವಂತೆ ತಿಳಿಸಲಾಗಿದೆ. ಮುನ್ನೆಚ್ಚರಿಕ ಕ್ರಮವಾಗಿ ಅಗತ್ಯ ಸ್ವಚ್ಛತೆ, ಬಂದೋಬಸ್ತ್,ಕುರಿಯುವ ನೀರಿನ ಸೌಕರ್ಯ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.</p>.<p>ತಾಲೂಕು ವೈದ್ಯಾಧಿಕಾರಿ ಡಾ. ಹಾಲಸ್ವಾಮಿ ಮಠ, ವೈದ್ಯಾಧಿಕಾರಿ ಡಾ. ಬಸವರಾಜ್, ವೈದ್ಯೆ ಡಾ.ಶಕುಂತಲಾ ಮುಖಂಡರಾದ ವಿಶ್ವನಾಥಯ್ಯ, ಮರಿಯಪ್ಪ, ಆರೋಗ್ಯ ಸಿಬ್ಬಂದಿ ಬಾಲ ಚಂದ್ರ, ರಮೇಶ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ(ಉಚ್ಚಂಗಿದುರ್ಗ): </strong>ಅರಸೀಕೆರೆ ಸಮುದಾಯ ಆರೋಗ್ಯ ಕೇಂದ್ರ ವೈದ್ಯರ ಕೊರತೆ ಹಿನ್ನಲೆಯಲ್ಲಿ ಮಂಜೂರಾಗಿದ್ದ ಜನ ಔಷಧ ಕೇಂದ್ರ ಕೈ ತಪ್ಪಿದಂತಾಗಿದೆ ಸಂಸದ ವೈ.ದೇವೇಂದ್ರಪ್ಪ ಕಿಡಿಕಾರಿದರು.</p>.<p>ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಅತಿ ಹೆಚ್ಚು ಜನ ಸಂಖ್ಯೆ ಹೊಂದಿರುವ ಹೋಬಳಿ ಕೇಂದ್ರ ಇದಾಗಿದ್ದು, ಬಡ ಕಾರ್ಮಿಕ ಕುಟುಂಬಗಳೇ ಅಧಿಕವಾಗಿದೆ. ಬಡವರಿಗೆ ಕಡಿಮೆ ದರದಲ್ಲಿ ಔಷಧ ಸಿಗಬೇಕು ಎನ್ನುವ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ಆಶಯಕ್ಕೆ ಹಿನ್ನಡೆಯಾದಂತಿದೆ. ಇದಕ್ಕೆ ಅಧಿಕಾರಿಗಳೇ ನೇರ ಹೊಣೆ ಎಂದು ಹೇಳಿದರು.</p>.<p>ಆಸ್ಪತ್ರೆ ಶವಗಾರ ದುರಸ್ತಿ ಕಾಮಗಾರಿ ಆರಂಭಗೊಂಡು ವರ್ಷವೇ ಕಳೆದು ಹೋದರು, ಕಾಮಗಾರಿ ಪೂರ್ಣಗೊಂಡಿಲ್ಲ ಈ ಕುರಿತ ಗ್ರಾಮಸ್ಥರು ದೂರು ಸಲ್ಲಿಸಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕೋವಿಡ್ ನಿರ್ವಹಣೆಯಲ್ಲಿ ಬಳ್ಳಾರಿ ಜಿಲ್ಲೆ ಗಮನಾರ್ಹ ಸಾಧನೆ ಮಾಡಿದೆ. ಹಾಗೆಯೇ ಕೋವಿಡ್ ಲಸಿಕೆ ವಿತರಣೆಯಲ್ಲಿ ಹರಪನಹಳ್ಳಿ ತಾಲೂಕು ಪ್ರಗತಿ ಕಂಡಿದೆ.</p>.<p>ಕೋವಿಡ್ ರೂಪಾಂತರಿ ಓಮೈಕ್ರಾನ್ ಕಡಿವಾಣಕ್ಕೆ ಸರ್ಕಾರ ರಾತ್ರಿ ಕರ್ಪ್ಯು ಜಾರಿಗೆ ತಂದಿದೆ. ಸಾರ್ವಜನಿಕರು ಕಟ್ಟಿನಿಟ್ಟಾಗಿ ಪಾಲಿಸಿ ಸೋಂಕು ಕಡಿವಾಣಕ್ಕೆ ಸಹಕರಿಸಬೇಕು.</p>.<p>ಗ್ರಾಮ ದೇವತೆ ದಂಡಿನ ದುರ್ಗಮ್ಮ ಕಾರ್ತಿಕೋತ್ಸವದ ಅಂಗವಾಗಿ ನಡೆಯುವ ಜಾತ್ರೆಯನ್ನು ಸರಳ ರೀತಿಯಲ್ಲಿ ಮನೆಯಲ್ಲಿಯೇ ಆಚರಿಸಬೇಕು. ಈಗಾಗಲೇ ಸೀಮಿತ ಭಕ್ತರನ್ನೊಳಗೊಂದು ಪಾರಂಪರಿಕ ಆಚರಣೆ ಮಾಡುವಂತೆ ತಿಳಿಸಲಾಗಿದೆ. ಮುನ್ನೆಚ್ಚರಿಕ ಕ್ರಮವಾಗಿ ಅಗತ್ಯ ಸ್ವಚ್ಛತೆ, ಬಂದೋಬಸ್ತ್,ಕುರಿಯುವ ನೀರಿನ ಸೌಕರ್ಯ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.</p>.<p>ತಾಲೂಕು ವೈದ್ಯಾಧಿಕಾರಿ ಡಾ. ಹಾಲಸ್ವಾಮಿ ಮಠ, ವೈದ್ಯಾಧಿಕಾರಿ ಡಾ. ಬಸವರಾಜ್, ವೈದ್ಯೆ ಡಾ.ಶಕುಂತಲಾ ಮುಖಂಡರಾದ ವಿಶ್ವನಾಥಯ್ಯ, ಮರಿಯಪ್ಪ, ಆರೋಗ್ಯ ಸಿಬ್ಬಂದಿ ಬಾಲ ಚಂದ್ರ, ರಮೇಶ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>