<p><strong>ಹಗರಿಬೊಮ್ಮನಹಳ್ಳಿ</strong>: ‘ಪಟ್ಟಣದಲ್ಲಿ ಪುರಸಭೆ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.</p>.<p>ಪಟ್ಟಣದ ಪುರಸಭೆ ಕಚೇರಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.</p>.<p>ಪುರಸಭೆ ಅಧ್ಯಕ್ಷ ಎಂ.ಮರಿರಾಮಪ್ಪ ಮಾತನಾಡಿ, ‘ಪುರಸಭೆ ಕಚೇರಿಯ ಹಳೇ ಕಟ್ಟಡವನ್ನು ನೆಲಸಮಗೊಳಿಸಿ ಅದೇ ಜಾಗದಲ್ಲಿ ಕಚೇರಿಯ ಕಟ್ಟಡ ನಿರ್ಮಿಸಲು ಗುತ್ತಿಗೆದಾರರೊಬ್ಬರು ಟೆಂಡರ್ ಪಡೆದಿದ್ದಾರೆ. ಆದರೂ ಈವರೆಗೂ ಕಾಮಗಾರಿ ಆರಂಭಿಸಿಲ್ಲ’ ಎಂದು ಮಾಹಿತಿ ನೀಡಿದರು. ಗುತ್ತಿಗೆದಾರರಿಗೆ ದೂರವಾಣಿ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ.</p>.<p>‘23ನೇ ವಾರ್ಡ್ನ ಕುರದಗಡ್ಡಿಯಲ್ಲಿ ನಗರೋತ್ಥಾನ ಯೋಜನೆಯಲ್ಲಿ ₹25 ಲಕ್ಷ ಮೊತ್ತದ ಕಾಮಗಾರಿ ಮಂಜೂರಾಗಿದ್ದು ಆರಂಭಿಸುವಂತೆ, ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು’ ಎಂದು ಸದಸ್ಯ ಜೋಗಿ ಹನುಮಂತಪ್ಪ ವಿನಂತಿಸಿಕೊಂಡರು.</p>.<p>ಸ್ಥಿರ ಆಸ್ತಿಗಳಿಗೆ ಫಾರಂ-3 ವಿತರಿಸುವ ಗೊಂದಲವನ್ನು ಪರಿಹರಿಸುವಂತೆ ಜಿಲ್ಲಾಧಿಕಾರಿಗೆ ಅಧ್ಯಕ್ಷ ಮನವಿ ಮಾಡಿದರು. ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.</p>.<p>‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಪುರಸಭೆಯಿಂದ ಸಂಪೂರ್ಣ ಬೆಂಬಲ ನೀಡಿ ಶೇ 100ರಷ್ಟು ಸಾಧನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಮುಗಳಿ, ಸದಸ್ಯರಾದ ದೀಪಕ್ ಸಾ ಕಠಾರೆ, ನಾಗರಾಜ ಜನ್ನು, ಮುಖಂಡ ಸಿಕಂದರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ‘ಪಟ್ಟಣದಲ್ಲಿ ಪುರಸಭೆ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.</p>.<p>ಪಟ್ಟಣದ ಪುರಸಭೆ ಕಚೇರಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.</p>.<p>ಪುರಸಭೆ ಅಧ್ಯಕ್ಷ ಎಂ.ಮರಿರಾಮಪ್ಪ ಮಾತನಾಡಿ, ‘ಪುರಸಭೆ ಕಚೇರಿಯ ಹಳೇ ಕಟ್ಟಡವನ್ನು ನೆಲಸಮಗೊಳಿಸಿ ಅದೇ ಜಾಗದಲ್ಲಿ ಕಚೇರಿಯ ಕಟ್ಟಡ ನಿರ್ಮಿಸಲು ಗುತ್ತಿಗೆದಾರರೊಬ್ಬರು ಟೆಂಡರ್ ಪಡೆದಿದ್ದಾರೆ. ಆದರೂ ಈವರೆಗೂ ಕಾಮಗಾರಿ ಆರಂಭಿಸಿಲ್ಲ’ ಎಂದು ಮಾಹಿತಿ ನೀಡಿದರು. ಗುತ್ತಿಗೆದಾರರಿಗೆ ದೂರವಾಣಿ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ.</p>.<p>‘23ನೇ ವಾರ್ಡ್ನ ಕುರದಗಡ್ಡಿಯಲ್ಲಿ ನಗರೋತ್ಥಾನ ಯೋಜನೆಯಲ್ಲಿ ₹25 ಲಕ್ಷ ಮೊತ್ತದ ಕಾಮಗಾರಿ ಮಂಜೂರಾಗಿದ್ದು ಆರಂಭಿಸುವಂತೆ, ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು’ ಎಂದು ಸದಸ್ಯ ಜೋಗಿ ಹನುಮಂತಪ್ಪ ವಿನಂತಿಸಿಕೊಂಡರು.</p>.<p>ಸ್ಥಿರ ಆಸ್ತಿಗಳಿಗೆ ಫಾರಂ-3 ವಿತರಿಸುವ ಗೊಂದಲವನ್ನು ಪರಿಹರಿಸುವಂತೆ ಜಿಲ್ಲಾಧಿಕಾರಿಗೆ ಅಧ್ಯಕ್ಷ ಮನವಿ ಮಾಡಿದರು. ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.</p>.<p>‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಪುರಸಭೆಯಿಂದ ಸಂಪೂರ್ಣ ಬೆಂಬಲ ನೀಡಿ ಶೇ 100ರಷ್ಟು ಸಾಧನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಮುಗಳಿ, ಸದಸ್ಯರಾದ ದೀಪಕ್ ಸಾ ಕಠಾರೆ, ನಾಗರಾಜ ಜನ್ನು, ಮುಖಂಡ ಸಿಕಂದರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>