<p><strong>ಹೊಸಪೇಟೆ (ವಿಜಯನಗರ):</strong> ಪೌರ ವೃಂದದ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು ಸಹಿತ 19 ಬೇಡಿಕೆಗಳನ್ನು ಮುಂದಿಟ್ಟು ನಗರ ಸ್ಥಳೀಯಾಡಳಿತ ಸಂಸ್ಥೆಗಳ ಸಿಬ್ಬಂದಿ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಶುಕ್ರವಾರ ಮಧ್ಯರಾತ್ರಿ ಕೊನೆಗೊಳಿಸಿದ್ದು, ಶನಿವಾರ ಬೆಳಿಗ್ಗೆಯಿಂದಲೇ ಕೆಲಸಕ್ಕೆ ಹಾಜರಾಗಿದ್ದಾರೆ.</p>.ಹೊಸಪೇಟೆ| ಪೌರ ಸಿಬ್ಬಂದಿ ಮುಷ್ಕರ 3ನೇ ದಿನಕ್ಕೆ: ನಗರದಲ್ಲಿ ಕಸದ ರಾಶಿ, ದುರ್ವಾಸನೆ.<p>‘ಕರ್ನಾಟಕ ರಾಜ್ಯ ಪೌರನೌಕರರ ಸಂಘದ 19 ಬೇಡಿಕೆಗಳ ಪೈಕಿ 10 ಬೇಡಿಕೆಗಳನ್ನು ಈಡೇರಿಸುವ ಕುರಿತು ಸರ್ಕಾರ ಭರವಸೆ ನೀಡಿದ ಮೇರೆಗೆ ಮುಷ್ಕರವನ್ನು ಶುಕ್ರವಾರ ಮಧ್ಯರಾತ್ರಿ ಹಿಂದೆಗೆದುಕೊಳ್ಳಲಾಯಿತು. ಶನಿವಾರ ಬೆಳಿಗ್ಗೆ 5 ಗಂಟೆಯಿಂದಲೇ ಸ್ವಚ್ಛತೆ ಸಹಿತ ನಮ್ಮ ಇತರ ಕೆಲಸ ಆರಂಭಿಸಿದ್ದೇವೆ’ ಎಂದು ಸಂಘದ ಹೊಸಪೇಟೆ ಶಾಖೆಯ ಅಧ್ಯಕ್ಷ ಬಿ.ಎಂ.ನಾಗೇಂದ್ರ ವರ್ಮಾ ತಿಳಿಸಿದರು.</p><p>ಬೆಳಿಗ್ಗೆ ಕಸದ ವಾಹನಗಳ ಓಡಾಟ ಆರಂಭವಾಯಿತು. ಆದರೆ ಹಲವೆಡೆ ಕಸದ ರಾಶ್ರಿ ಗುಡ್ಡೆಯಂತೆ ಬೆಳೆದ ಕಾರಣ ಮನೆ ಮನೆ ಕಸ ಸಂಗ್ರಹಕ್ಕೆ ನಿಗದಿತ ಸಮಯಕ್ಕೆ ಬರುವುದು ಸಾಧ್ಯವಾಗಲಿಲ್ಲ.</p>.ಹೊಸಪೇಟೆ | ಪೌರಸಿಬ್ಬಂದಿ ಮುಷ್ಕರ; ಸೇವೆ ಅಸ್ತವ್ಯಸ್ತ.<p>ಹೊಸಪೇಟೆ ನಗರದಲ್ಲಿ ಪ್ರತಿದಿನ ಸರಾಸರಿ 120 ಟನ್ನಷ್ಟು ಕಸ ಸಂಗ್ರಹವಾಗುತ್ತದೆ. ಈ ಮೂಲಕ ನಾಲ್ಕು ದಿನ ಕಸ ಎತ್ತದ ಕಾರಣ 480 ಟನ್ನಷ್ಟು ಕಸ ಮನೆಗಳು ಮತ್ತು ರಸ್ತೆ ಬದಿಯಲ್ಲೇ ಉಳಿದುಕೊಂಡಿದೆ.</p> .ಹೊಸಪೇಟೆ: ಹೃದಯಾಘಾತದಿಂದ ಹೆಡ್ ಕಾನ್ಸ್ಟೆಬಲ್ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಪೌರ ವೃಂದದ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು ಸಹಿತ 19 ಬೇಡಿಕೆಗಳನ್ನು ಮುಂದಿಟ್ಟು ನಗರ ಸ್ಥಳೀಯಾಡಳಿತ ಸಂಸ್ಥೆಗಳ ಸಿಬ್ಬಂದಿ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಶುಕ್ರವಾರ ಮಧ್ಯರಾತ್ರಿ ಕೊನೆಗೊಳಿಸಿದ್ದು, ಶನಿವಾರ ಬೆಳಿಗ್ಗೆಯಿಂದಲೇ ಕೆಲಸಕ್ಕೆ ಹಾಜರಾಗಿದ್ದಾರೆ.</p>.ಹೊಸಪೇಟೆ| ಪೌರ ಸಿಬ್ಬಂದಿ ಮುಷ್ಕರ 3ನೇ ದಿನಕ್ಕೆ: ನಗರದಲ್ಲಿ ಕಸದ ರಾಶಿ, ದುರ್ವಾಸನೆ.<p>‘ಕರ್ನಾಟಕ ರಾಜ್ಯ ಪೌರನೌಕರರ ಸಂಘದ 19 ಬೇಡಿಕೆಗಳ ಪೈಕಿ 10 ಬೇಡಿಕೆಗಳನ್ನು ಈಡೇರಿಸುವ ಕುರಿತು ಸರ್ಕಾರ ಭರವಸೆ ನೀಡಿದ ಮೇರೆಗೆ ಮುಷ್ಕರವನ್ನು ಶುಕ್ರವಾರ ಮಧ್ಯರಾತ್ರಿ ಹಿಂದೆಗೆದುಕೊಳ್ಳಲಾಯಿತು. ಶನಿವಾರ ಬೆಳಿಗ್ಗೆ 5 ಗಂಟೆಯಿಂದಲೇ ಸ್ವಚ್ಛತೆ ಸಹಿತ ನಮ್ಮ ಇತರ ಕೆಲಸ ಆರಂಭಿಸಿದ್ದೇವೆ’ ಎಂದು ಸಂಘದ ಹೊಸಪೇಟೆ ಶಾಖೆಯ ಅಧ್ಯಕ್ಷ ಬಿ.ಎಂ.ನಾಗೇಂದ್ರ ವರ್ಮಾ ತಿಳಿಸಿದರು.</p><p>ಬೆಳಿಗ್ಗೆ ಕಸದ ವಾಹನಗಳ ಓಡಾಟ ಆರಂಭವಾಯಿತು. ಆದರೆ ಹಲವೆಡೆ ಕಸದ ರಾಶ್ರಿ ಗುಡ್ಡೆಯಂತೆ ಬೆಳೆದ ಕಾರಣ ಮನೆ ಮನೆ ಕಸ ಸಂಗ್ರಹಕ್ಕೆ ನಿಗದಿತ ಸಮಯಕ್ಕೆ ಬರುವುದು ಸಾಧ್ಯವಾಗಲಿಲ್ಲ.</p>.ಹೊಸಪೇಟೆ | ಪೌರಸಿಬ್ಬಂದಿ ಮುಷ್ಕರ; ಸೇವೆ ಅಸ್ತವ್ಯಸ್ತ.<p>ಹೊಸಪೇಟೆ ನಗರದಲ್ಲಿ ಪ್ರತಿದಿನ ಸರಾಸರಿ 120 ಟನ್ನಷ್ಟು ಕಸ ಸಂಗ್ರಹವಾಗುತ್ತದೆ. ಈ ಮೂಲಕ ನಾಲ್ಕು ದಿನ ಕಸ ಎತ್ತದ ಕಾರಣ 480 ಟನ್ನಷ್ಟು ಕಸ ಮನೆಗಳು ಮತ್ತು ರಸ್ತೆ ಬದಿಯಲ್ಲೇ ಉಳಿದುಕೊಂಡಿದೆ.</p> .ಹೊಸಪೇಟೆ: ಹೃದಯಾಘಾತದಿಂದ ಹೆಡ್ ಕಾನ್ಸ್ಟೆಬಲ್ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>