ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಮೈಲಾರ ಜಾತ್ರಾ ಮಹೋತ್ಸವ, ದೇವರ ದರ್ಶನಕ್ಕೆ ಭಕ್ತರಿಗೆ ನಿಷೇಧ

Last Updated 3 ಫೆಬ್ರುವರಿ 2022, 13:10 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜಿಲ್ಲೆಯ ಹೂವಿನಹಡಗಲಿಯ ಮೈಲಾರದ ಮೈಲಾರಲಿಂಗೇಶ್ವರ ಸ್ವಾಮಿ, ಕುರುವತ್ತಿ ಮಲ್ಲಿಕಾರ್ಜುನ ಸ್ವಾಮಿ, ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಚ್ಚಿನ ಜನಸಂದಣಿ ಸೇರುವ ಸಾಧ್ಯತೆ ಇರುವುದರಿಂದ ದೇವರ ದರ್ಶನಕ್ಕೆ ಭಕ್ತರಿಗೆ ನಿಷೇಧ ಹೇರಿ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ಗುರುವಾರ ಆದೇಶ ಹೊರಡಿಸಿದ್ದಾರೆ.

ಫೆ. 8ರಿಂದ 19ರ ವರೆಗೆ ಮೈಲಾರ ಜಾತ್ರೆ, ಫೆ. 25ರಿಂದ ಮಾ. 3ರ ವರೆಗೆ ಮಲ್ಲಿಕಾರ್ಜುನ ಸ್ವಾಮಿ, ಬಸವೇಶ್ವರ ಸ್ವಾಮಿ ಜಾತ್ರೆಗೆ ಲಕ್ಷಾಂತರ ಭಕ್ತರು ಬರುವ ಸಾಧ್ಯತೆ ಇದೆ. ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುತ್ತಿರುವುದರಿಂದ ಅದನ್ನು ತಡೆಯಲು ಭಕ್ತರಿಗೆ ದೇವರ ದರ್ಶನಕ್ಕೆ ನಿಷೇಧ ಹೇರಲಾಗಿದೆ. ಜಾತ್ರೆ ನಡೆಯಲಿರುವ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT