ಶನಿವಾರ ಭರತ ಹುಣ್ಣಿಮೆ ಅಂಗವಾಗಿ ಸುಕ್ಷೇತ್ರದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರು ಮೈಲಾರಲಿಂಗನ ಲಾಂಛನವುಳ್ಳ ಧ್ವಜಕ್ಕೆ ಪೂಜೆ ಸಲ್ಲಿಸಿ ಆರೋಹಣ ಮಾಡಿದರು. ಬಳಿಕ ಜಾತ್ರೆಯಲ್ಲಿ ಅಳವಡಿಸುವ ತಾತ್ಕಾಲಿಕ ಹುಂಡಿಗಳಿಗೆ ಪೂಜೆ ಸಲ್ಲಿಸಲಾಯಿತು. ಅರ್ಚಕ ಪ್ರಮೋದ ಭಟ್, ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ. ಕೃಷ್ಣಪ್ಪ ಇದ್ದರು.