ಗುರುವಾರ ಸಂಜೆ ಇಲ್ಲಿ ನಡೆದ ಹಂಪಿ ಕನ್ನಡ ವಿಶ್ವವಿದ್ಯಾಲಯದ 31ನೇ ಘಟಿಕೋತ್ಸವದಲ್ಲಿ ನಾಡೋಜ ಗೌರವ ಹಾಗೂ ಡಿ.ಲಿಟ್., ಪಿಎಚ್.ಡಿ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಹೊಸ ಶಿಕ್ಷಣ ನೀತಿ ಉಜ್ವಲ ಭಾರತದ ಭವಿಷ್ಯಕ್ಕೆ ನಾಂದಿ ಹಾಡಲಿದೆ. ಒಂದು ಭಾರತ, ಶ್ರೇಷ್ಠ ಭಾರತ, ನವ ಭಾರತ, ಆತ್ಮನಿರ್ಭರ ಭಾರತ ಕಟ್ಟುವ ಕೆಲಸಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.