ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಪಂಚಮಿ; ಹುತ್ತಕ್ಕೆ ಹಾಲೆರೆದ ಭಕ್ತರು

Last Updated 1 ಆಗಸ್ಟ್ 2022, 9:54 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಾಗರಪಂಚಮಿ ಹಬ್ಬವನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಸಡಗರ, ಸಂಭ್ರಮ ಹಾಗೂ ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು.

ತಾಲ್ಲೂಕಿನ ಬುಕ್ಕಸಾಗರದ ಏಳು ಹೆಡೆ ನಾಗಪ್ಪ, ನಗರದ ಸಂಡೂರು ರಸ್ತೆ, ನಾಗಪ್ಪನ ಕಟ್ಟೆ, ಅಮರಾವತಿ, ಚಿತ್ತವಾಡ್ಗಿ ಸೇರಿದಂತೆ ಹಲವೆಡೆ ಭಕ್ತರು ನಾಗದೇವತೆಗೆ ವಿಶೇಷ ಪೂಜೆ ನೆರವೇರಿಸಿದರು. ಹುತ್ತಕ್ಕೆ ಪುಷ್ಪ ಸಮರ್ಪಿಸಿ, ಹಾಲೆರೆದು ಹರಕೆ ತೀರಿಸಿದರು.

ಬೆಳಿಗ್ಗೆಯಿಂದಲೇ ನಾಗದೇವತೆಯ ದೇವಸ್ಥಾನಗಳಿಗೆ ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಬಂದು ಪೂಜೆ ಸಲ್ಲಿಸಿದ್ದರಿಂದ, ಹುತ್ತದ ಬಳಿ ಹೂ, ಕಾಯಿ, ಹಣ್ಣು, ನೈವೇದ್ಯದ ಗುಡ್ಡೆ ಸೃಷ್ಟಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT