ತೇರು ದೇವಸ್ಥಾನದಿಂದ ಸ್ವಲ್ಪ ದೂರ ಕ್ರಮಿಸಿದಾಗ ಈ ಘಟನೆ ನಡೆದಿದೆ. ಘಟನೆಯಿಂದ ಭಕ್ತರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಪೊಲೀಸರು ಜನರನ್ನು ನಿಯಂತ್ರಿಸಿ, ಶವ ತೆಗೆದು ಆಸ್ಪತ್ರೆಗೆ ಸಾಗಿಸಿದರು. ಬಳಿಕ ತೇರಿನ ಗಾಲಿಯನ್ನು ನೀರಿನಿಂದ ತೊಳೆದು ದೇವಸ್ಥಾನದ ವರೆಗೆ ಎಳೆಯಲಾಯಿತು. ಸಂಜೆಯ ಘಟನೆಯಿಂದ ದಿನವಿಡೀ ಇದ್ದ ಸಂಭ್ರಮ ಮರೆಯಾಗಿತ್ತು.