ಹೊಸಪೇಟೆ (ವಿಜಯನಗರ): ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ರೈತರು ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50 ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ನಗರದ ಸಾಯಿಬಾಬಾ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ ವರೆಗೆ ಜಾಥಾ ನಡೆಸಿದರು. ನಂತರ ಹೆದ್ದಾರಿಯ ಲ್ಲಿ ಕುಳಿತು, ವಾಹನಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ವಾಹನ ಸಂಚಾರ ತಡೆದಿದ್ದಾರೆ.
ರಸ್ತೆ ತಡೆ ಚಳವಳಿಯಿಂದ ಬೆಂಗಳೂರು, ಮಂಗಳೂರು, ವಿಜಯಪುರ, ಪುಣೆಗೆ ಹೋಗುವವರು ಪರದಾಟ ನಡೆಸುವಂತಾಗಿದೆ. ರಸ್ತೆಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.