ಗಂಡಾಂತರ: ‘ದೇಶದ ಪ್ರಜಾಪ್ರಭುತ್ವ, ಸಂವಿಧಾನ, ಬಹುತ್ವ ಸಂಸ್ಕೃತಿಗೆ ಮತ್ತು ದುಡಿಯುವ ವರ್ಗಕ್ಕೆ 1947ರ ನಂತರ ಮೊದಲ ಬಾರಿಗೆ ಗಂಡಾಂತರ ಎದುರಾಗಿದೆ. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ರೈತರು, ಕೃಷಿ ಕೂಲಿಕಾರರು, ಅಸಂಘಟಿತ ವಲಯದ ಕಾರ್ಮಿಕರು, ಸಂಘಟಿತ ವಲಯದ ಕಾರ್ಮಿಕರೆಲ್ಲ ಭಾರಿ ತೊಂದರೆಗೆ ಸಿಲುಕಿದ್ದರು. ಅವರೇ ಮುಂದೆ ಇಂದಿರಾ ಗಾಂಧಿ ಅವರನ್ನು ಸೋಲಿಸಿದರು. ಇದೀಗ ಮತ್ತೆ ಅಂತಹದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ತೊಂದರೆಗೆ ಒಳಗಾದವರು ಸಂಘಟಿತರಾದರೆ ಪ್ರಧಾನಿ ಮೋದಿ ಅವರನ್ನು ಸೋಲಿಸುವುದು ಸಹ ಕಷ್ಟವಲ್ಲ’ ಎಂದರು.